ಬ್ರೇಕಿಂಗ್ ನ್ಯೂಸ್
07-07-25 07:13 pm Mangalore Correspondent ಕ್ರೈಂ
ಉಳ್ಳಾಲ, ಜು.7 : ಹದಿನಾರರ ವಯಸ್ಸಿನ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗದೇ ಇದ್ದು, ಆಕೆಯನ್ನ ಆಮಿಷ ತೋರಿಸಿ ಯಾರೋ ಅಪಹರಿಸಿ ಹೋಗಿರುವ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನ ಅಪಹರಿಸಿದ ಆರೋಪಿ ಯುವಕ ಮತ್ತು ಆತನಿಗೆ ಸಹಕರಿಸಿದ ದಂಪತಿಯನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಬಾಲಕಿಯನ್ನ ಅಪಹರಿಸಿದ ಆರೋಪಿಯಾಗಿದ್ದು, ಅಪ್ರಾಪ್ತೆಯನ್ನ ಆಕೆಯ ಮನೆಯಿಂದ ಅಪಹರಿಸಲು ಶಹಬಾಝ್ ಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ಎಂಬ ದಂಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮುಸ್ಲಿಂ ವ್ಯಕ್ತಿಯೋರ್ವರ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ವ್ಯಕ್ತಿಯು ಉಳ್ಳಾಲ ಠಾಣೆಯಲ್ಲಿ ತನ್ನ ಮಗಳನ್ನ ಯಾರೋ ಅಪಹರಿಸಿರೋದಾಗಿ ದೂರು ನೀಡಿದ್ದರು. ಶಹಭಾಝ್ ಈ ಮೊದಲೂ ಬಾಲಕಿಯನ್ನ ಪುಸಲಾಯಿಸಿ ಆಕೆಯ ಮನೆಯಿಂದ ಕರಕೊಂಡು ಹೋಗಿದ್ದನಂತೆ. ಮತ್ತೆ ಮನೆಗೆ ಹಿಂತಿರುಗಿದ್ದ ಬಾಲಕಿಗೆ ಪೋಷಕರು ಗದರಿದ್ದರು. ಪೋಷಕರು ತನಗೆ ಗದರಿದ್ದ ವಿಚಾರವನ್ನ ಬಾಲಕಿ ಶಹಬಾಝ್ ಗೆ ತಿಳಿಸಿದ್ದಳಂತೆ.
ಇದೀಗ ಶಹಭಾಝ್ ತನ್ನ ಪರಿಚಯಸ್ಥರಾದ ಅಮೀರ್ ಸೊಹೈಲ್ ಮತ್ತು ನಿಶಾ ದಂಪತಿ ಮೂಲಕ ಬಾಲಕಿಯನ್ನ ಮತ್ತೆ ಅಪಹರಿಸಿದ್ದನೆನ್ನಲಾಗಿದೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನ ಅಪಹರಿಸಿದ್ದ ಆರೋಪಿಗಳನ್ನ ಪತ್ತೆಹಚ್ಚಿದ್ದಾರೆ.
ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನ ಉಳ್ಳಾಲ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A 16-year-old girl was allegedly kidnapped from her home in Ullal, leading to the arrest of a youth and a couple under the POCSO (Protection of Children from Sexual Offences) Act, police officials confirmed.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm