ಬ್ರೇಕಿಂಗ್ ನ್ಯೂಸ್
07-07-25 07:13 pm Mangalore Correspondent ಕ್ರೈಂ
ಉಳ್ಳಾಲ, ಜು.7 : ಹದಿನಾರರ ವಯಸ್ಸಿನ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗದೇ ಇದ್ದು, ಆಕೆಯನ್ನ ಆಮಿಷ ತೋರಿಸಿ ಯಾರೋ ಅಪಹರಿಸಿ ಹೋಗಿರುವ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನ ಅಪಹರಿಸಿದ ಆರೋಪಿ ಯುವಕ ಮತ್ತು ಆತನಿಗೆ ಸಹಕರಿಸಿದ ದಂಪತಿಯನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಬಾಲಕಿಯನ್ನ ಅಪಹರಿಸಿದ ಆರೋಪಿಯಾಗಿದ್ದು, ಅಪ್ರಾಪ್ತೆಯನ್ನ ಆಕೆಯ ಮನೆಯಿಂದ ಅಪಹರಿಸಲು ಶಹಬಾಝ್ ಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ಎಂಬ ದಂಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮುಸ್ಲಿಂ ವ್ಯಕ್ತಿಯೋರ್ವರ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ವ್ಯಕ್ತಿಯು ಉಳ್ಳಾಲ ಠಾಣೆಯಲ್ಲಿ ತನ್ನ ಮಗಳನ್ನ ಯಾರೋ ಅಪಹರಿಸಿರೋದಾಗಿ ದೂರು ನೀಡಿದ್ದರು. ಶಹಭಾಝ್ ಈ ಮೊದಲೂ ಬಾಲಕಿಯನ್ನ ಪುಸಲಾಯಿಸಿ ಆಕೆಯ ಮನೆಯಿಂದ ಕರಕೊಂಡು ಹೋಗಿದ್ದನಂತೆ. ಮತ್ತೆ ಮನೆಗೆ ಹಿಂತಿರುಗಿದ್ದ ಬಾಲಕಿಗೆ ಪೋಷಕರು ಗದರಿದ್ದರು. ಪೋಷಕರು ತನಗೆ ಗದರಿದ್ದ ವಿಚಾರವನ್ನ ಬಾಲಕಿ ಶಹಬಾಝ್ ಗೆ ತಿಳಿಸಿದ್ದಳಂತೆ.
ಇದೀಗ ಶಹಭಾಝ್ ತನ್ನ ಪರಿಚಯಸ್ಥರಾದ ಅಮೀರ್ ಸೊಹೈಲ್ ಮತ್ತು ನಿಶಾ ದಂಪತಿ ಮೂಲಕ ಬಾಲಕಿಯನ್ನ ಮತ್ತೆ ಅಪಹರಿಸಿದ್ದನೆನ್ನಲಾಗಿದೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನ ಅಪಹರಿಸಿದ್ದ ಆರೋಪಿಗಳನ್ನ ಪತ್ತೆಹಚ್ಚಿದ್ದಾರೆ.
ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನ ಉಳ್ಳಾಲ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A 16-year-old girl was allegedly kidnapped from her home in Ullal, leading to the arrest of a youth and a couple under the POCSO (Protection of Children from Sexual Offences) Act, police officials confirmed.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm