ಬ್ರೇಕಿಂಗ್ ನ್ಯೂಸ್
07-07-25 10:18 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ದುಬೈನ ಎನ್ನೆಂಸಿ ಹೆಲ್ತ್ ಸೆಂಟರಿನಲ್ಲಿ ಉದ್ಯೋಗ ಇದೆಯೆಂದು ಹೇಳಿ ಮಹಿಳೆಯೊಬ್ಬಳು ಮಾಡಿದ ಫೋನ್ ಕರೆಗೆ ಮಂಗಳೂರಿನ ಯುವ ವೈದ್ಯ ಬೌಲ್ಡ್ ಆಗಿದ್ದು, ಕುಳಿತಲ್ಲೇ 4.20 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾಗಿದೆ.
ಜೂನ್ 6ರಂದು ಸಂಗೀತಾ ಎಂದು ತನ್ನನ್ನು ಪರಿಚಯಿಸಿದ್ದ ಮಹಿಳೆ ಮಂಗಳೂರಿನ ವೈದ್ಯರೊಬ್ಬರಿಗೆ ಕರೆ ಮಾಡಿದ್ದಾಳೆ. ತಾನು ದುಬೈನ ಎನ್ ಎಂಸಿ ಹೆಲ್ತ್ ಸೆಂಟರಿನಲ್ಲಿದ್ದು ಇಲ್ಲಿ ಡಾಕ್ಟರ್ ಹುದ್ದೆಯೊಂದು ಖಾಲಿಯಿದ್ದು, ನೀವು ಎಪ್ಲೈ ಮಾಡಬಹುದು ಎಂದು ಹೇಳಿ ಆಫರ್ ಮಾಡಿದ್ದಳು. ಅಲ್ಲದೆ, ಹುದ್ದೆ ಖಾಲಿಯಿರುವ ಬಗ್ಗೆ ಮೈಲ್ ಸಂದೇಶ ಕಳುಹಿಸುವುದಾಗಿಯೂ ಹೇಳಿದ್ದಳು.
ಆನಂತರ, support@thejobswitch.com ಹೆಸರಿನಲ್ಲಿ ವೈದ್ಯರಿಗೆ ಮೈಲ್ ಬಂದಿದ್ದು, ಹುದ್ದೆಯ ವಿವರ, ಸ್ಯಾಲರಿ ಇತ್ಯಾದಿ ಮಾಹಿತಿಯನ್ನೂ ಕೊಡಲಾಗಿತ್ತು. ಇದರ ಬೆನ್ನಲ್ಲೇ ವಿನಯ್ ಸಿಂಗ್ ಎಂಬಾತ ವೈದ್ಯರನ್ನು ಸಂಪರ್ಕಿಸಿದ್ದು, ಎನ್ನೆಂಸಿ ಹೆಲ್ತ್ ಸೆಂಟರಿನಲ್ಲಿ ಉದ್ಯೋಗ ಖಾತ್ರಿ ಪಡಿಸುವುದಕ್ಕೆ ರಿಜಿಸ್ಟ್ರೇಶನ್ ಮಾಡುವಂತೆ ಹೇಳಿ ಅದಕ್ಕಾಗಿ 5499 ರೂ. ಕಳಿಸುವಂತೆ ತಿಳಿಸಿದ್ದ. ಇದನ್ನು ನಂಬಿದ ಮಂಗಳೂರಿನ ವೈದ್ಯ ಜೂನ್ 13ರಂದು ಹಣವನ್ನು ರವಾನಿಸಿದ್ದಾರೆ. ಆಮೇಲೆ ವೆರಿಫಿಕೇಶನ್, ಪ್ರೊಸೆಸ್ಸಿಂಗ್, ಲೈಸನ್ಸಿಂಗ್, ಎನ್ಓಸಿ ಇತ್ಯಾದಿ ಹೆಸರಲ್ಲಿ ಹಣವನ್ನು ಕೇಳಿದ್ದು, ವೈದ್ಯರು ದುಬೈ ಉದ್ಯೋಗ ಸಿಕ್ಕೇಬಿಡ್ತು ಎಂದುಕೊಂಡು ಹಣ ಕಳಿಸಿದ್ದರು. ಒಟ್ಟು 4,20,062 ರೂಪಾಯಿ ಹಣವನ್ನು ಅಪರಿಚಿತ ಹೇಳಿದ ಖಾತೆಗಳಿಗೆ ವರ್ಗಾಯಿಸಿದ್ದರು.
ಇಷ್ಟಾದರೂ, ಹಣದ ಬೇಡಿಕೆ ನಿಂತಿರಲಿಲ್ಲ. ಮತ್ತೆ 2.62 ಲಕ್ಷ ರೂಪಾಯಿ ಹಣವನ್ನು ಕಳಿಸುವಂತೆ ವೈದ್ಯರಿಗೆ ಸೂಚಿಸಲಾಗಿತ್ತು. ಇದರಿಂದ ಸಂಶಯಕ್ಕೀಡಾದ ವೈದ್ಯ ತನ್ನ ಗೆಳೆಯರಲ್ಲಿ ಹೇಳಿಕೊಂಡಿದ್ದು, ಎನ್ನೆಂಸಿ ಹೆಲ್ತ್ ಸೆಂಟರಿನಲ್ಲಿ ಜಾಬ್ ಆಫರ್ ಇರೋದು ಹೌದಾ ಎಂದು ಚೆಕ್ ಮಾಡಲು ಮುಂದಾಗಿದ್ದರು. ಚೆಕ್ ಮಾಡಿದಾಗ, ಎನ್ನೆಂಸಿ ಸಂಸ್ಥೆಯಲ್ಲಿ ಅಂತಹ ಹುದ್ದೆಯೇ ಇಲ್ಲ ಎನ್ನುವುದು ಗೊತ್ತಾಗಿದೆ. ತಾನು ಮೋಸ ಹೋದ ಅರಿವಾಗುತ್ತಿದ್ದಂತೆ ವೈದ್ಯ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದು, ಸೈಬರ್ ವಂಚಕರು ಹೀಗೂ ಮೋಸ ಮಾಡುತ್ತಾರಲ್ಲಾ ಎಂದು ಹುಬ್ಬೇರಿಸಿದ್ದಾರೆ.
In a shocking case of cyber fraud, a young doctor from Mangaluru was duped of ₹4.20 lakh after falling for a fake job offer allegedly from NMC Healthcare in Dubai. The incident has been reported at the Kankanady Town Police Station in Mangaluru.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm