ಬ್ರೇಕಿಂಗ್ ನ್ಯೂಸ್
07-07-25 10:18 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ದುಬೈನ ಎನ್ನೆಂಸಿ ಹೆಲ್ತ್ ಸೆಂಟರಿನಲ್ಲಿ ಉದ್ಯೋಗ ಇದೆಯೆಂದು ಹೇಳಿ ಮಹಿಳೆಯೊಬ್ಬಳು ಮಾಡಿದ ಫೋನ್ ಕರೆಗೆ ಮಂಗಳೂರಿನ ಯುವ ವೈದ್ಯ ಬೌಲ್ಡ್ ಆಗಿದ್ದು, ಕುಳಿತಲ್ಲೇ 4.20 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾಗಿದೆ.
ಜೂನ್ 6ರಂದು ಸಂಗೀತಾ ಎಂದು ತನ್ನನ್ನು ಪರಿಚಯಿಸಿದ್ದ ಮಹಿಳೆ ಮಂಗಳೂರಿನ ವೈದ್ಯರೊಬ್ಬರಿಗೆ ಕರೆ ಮಾಡಿದ್ದಾಳೆ. ತಾನು ದುಬೈನ ಎನ್ ಎಂಸಿ ಹೆಲ್ತ್ ಸೆಂಟರಿನಲ್ಲಿದ್ದು ಇಲ್ಲಿ ಡಾಕ್ಟರ್ ಹುದ್ದೆಯೊಂದು ಖಾಲಿಯಿದ್ದು, ನೀವು ಎಪ್ಲೈ ಮಾಡಬಹುದು ಎಂದು ಹೇಳಿ ಆಫರ್ ಮಾಡಿದ್ದಳು. ಅಲ್ಲದೆ, ಹುದ್ದೆ ಖಾಲಿಯಿರುವ ಬಗ್ಗೆ ಮೈಲ್ ಸಂದೇಶ ಕಳುಹಿಸುವುದಾಗಿಯೂ ಹೇಳಿದ್ದಳು.
ಆನಂತರ, support@thejobswitch.com ಹೆಸರಿನಲ್ಲಿ ವೈದ್ಯರಿಗೆ ಮೈಲ್ ಬಂದಿದ್ದು, ಹುದ್ದೆಯ ವಿವರ, ಸ್ಯಾಲರಿ ಇತ್ಯಾದಿ ಮಾಹಿತಿಯನ್ನೂ ಕೊಡಲಾಗಿತ್ತು. ಇದರ ಬೆನ್ನಲ್ಲೇ ವಿನಯ್ ಸಿಂಗ್ ಎಂಬಾತ ವೈದ್ಯರನ್ನು ಸಂಪರ್ಕಿಸಿದ್ದು, ಎನ್ನೆಂಸಿ ಹೆಲ್ತ್ ಸೆಂಟರಿನಲ್ಲಿ ಉದ್ಯೋಗ ಖಾತ್ರಿ ಪಡಿಸುವುದಕ್ಕೆ ರಿಜಿಸ್ಟ್ರೇಶನ್ ಮಾಡುವಂತೆ ಹೇಳಿ ಅದಕ್ಕಾಗಿ 5499 ರೂ. ಕಳಿಸುವಂತೆ ತಿಳಿಸಿದ್ದ. ಇದನ್ನು ನಂಬಿದ ಮಂಗಳೂರಿನ ವೈದ್ಯ ಜೂನ್ 13ರಂದು ಹಣವನ್ನು ರವಾನಿಸಿದ್ದಾರೆ. ಆಮೇಲೆ ವೆರಿಫಿಕೇಶನ್, ಪ್ರೊಸೆಸ್ಸಿಂಗ್, ಲೈಸನ್ಸಿಂಗ್, ಎನ್ಓಸಿ ಇತ್ಯಾದಿ ಹೆಸರಲ್ಲಿ ಹಣವನ್ನು ಕೇಳಿದ್ದು, ವೈದ್ಯರು ದುಬೈ ಉದ್ಯೋಗ ಸಿಕ್ಕೇಬಿಡ್ತು ಎಂದುಕೊಂಡು ಹಣ ಕಳಿಸಿದ್ದರು. ಒಟ್ಟು 4,20,062 ರೂಪಾಯಿ ಹಣವನ್ನು ಅಪರಿಚಿತ ಹೇಳಿದ ಖಾತೆಗಳಿಗೆ ವರ್ಗಾಯಿಸಿದ್ದರು.
ಇಷ್ಟಾದರೂ, ಹಣದ ಬೇಡಿಕೆ ನಿಂತಿರಲಿಲ್ಲ. ಮತ್ತೆ 2.62 ಲಕ್ಷ ರೂಪಾಯಿ ಹಣವನ್ನು ಕಳಿಸುವಂತೆ ವೈದ್ಯರಿಗೆ ಸೂಚಿಸಲಾಗಿತ್ತು. ಇದರಿಂದ ಸಂಶಯಕ್ಕೀಡಾದ ವೈದ್ಯ ತನ್ನ ಗೆಳೆಯರಲ್ಲಿ ಹೇಳಿಕೊಂಡಿದ್ದು, ಎನ್ನೆಂಸಿ ಹೆಲ್ತ್ ಸೆಂಟರಿನಲ್ಲಿ ಜಾಬ್ ಆಫರ್ ಇರೋದು ಹೌದಾ ಎಂದು ಚೆಕ್ ಮಾಡಲು ಮುಂದಾಗಿದ್ದರು. ಚೆಕ್ ಮಾಡಿದಾಗ, ಎನ್ನೆಂಸಿ ಸಂಸ್ಥೆಯಲ್ಲಿ ಅಂತಹ ಹುದ್ದೆಯೇ ಇಲ್ಲ ಎನ್ನುವುದು ಗೊತ್ತಾಗಿದೆ. ತಾನು ಮೋಸ ಹೋದ ಅರಿವಾಗುತ್ತಿದ್ದಂತೆ ವೈದ್ಯ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದು, ಸೈಬರ್ ವಂಚಕರು ಹೀಗೂ ಮೋಸ ಮಾಡುತ್ತಾರಲ್ಲಾ ಎಂದು ಹುಬ್ಬೇರಿಸಿದ್ದಾರೆ.
In a shocking case of cyber fraud, a young doctor from Mangaluru was duped of ₹4.20 lakh after falling for a fake job offer allegedly from NMC Healthcare in Dubai. The incident has been reported at the Kankanady Town Police Station in Mangaluru.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm