ಬ್ರೇಕಿಂಗ್ ನ್ಯೂಸ್
07-07-25 10:31 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು 6.50 ಲಕ್ಷ ರೂ. ಕಳಕೊಂಡ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 25ರಂದು ವಾಟ್ಸಪ್ ನಲ್ಲಿ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ಟೆಲಿಗ್ರಾಮ್ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಆನಂತರ ಮತ್ತೆರಡು ಲಿಂಕ್ ಕಳುಹಿಸಿದ್ದು, ಅದರ ಮೂಲಕ 20 ವರ್ಕ್ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ್ದರು. ಇದಕ್ಕೂ ಮೊದಲು ವರ್ಕಿಂಗ್ ಐಡಿ ನಂಬರ್ ಕೊಡುವುದಕ್ಕಾಗಿ ಬ್ಯಾಂಕ್ ಖಾತೆ ವಿವರಗಳನ್ನು ನೀಡುವಂತೆ ಸೂಚಿಸಿದ್ದರು.
ಪ್ರತಿ ಟಾಸ್ಕ್ ಮುಗಿಸಿದಾಗ ಖಾತೆಗೆ 180 ರೂ. ಹಣ ಹಾಕುವುದಾಗಿ ಹೇಳಿದ್ದರು. ಆನಂತರ, ಇಂತಿಷ್ಟು ಹಣ ಕಟ್ಟಿ ಟಾಸ್ಕ್ ಪೂರೈಸಿದರೆ ದುಪ್ಪಟ್ಟು ಹಣ ಸಿಗುವುದಾಗಿ ನಂಬಿಸಿದ್ದಾರೆ. ಅದರಂತೆ, ಈ ವ್ಯಕ್ತಿ ಅಪರಿಚಿರು ಹೇಳಿದ ರೀತಿಯಲ್ಲೇ ಹಣ ಪಾವತಿಸಿದ್ದರು. ಮತ್ತಷ್ಟು ಹಣ ಹಾಕಿದರೆ ಡಬಲ್ ಆಗುವುದಾಗಿ ನಂಬಿಸಿದ್ದು ಮತ್ತು ಅದರ ತೆರಿಗೆಯೆಂದು ಹೇಳಿ ಇನ್ನಷ್ಟು ಹಣ ಕೇಳಿದ್ದರು. ಅದೇ ಪ್ರಕಾರ ಹಂತ ಹಂತವಾಗಿ 6.50 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಅಲ್ಲಿ ವರೆಗೂ ಈ ವ್ಯಕ್ತಿಗೆ 380 ರೂ. ಮಾತ್ರ ಮರಳಿ ಸಿಕ್ಕಿತ್ತು. ಹಣವನ್ನು ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟುವಂತೆ ಹೇಳಿದ್ದು ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
A man from Mangaluru has reportedly lost ₹6.5 lakh after falling victim to an online scam that promised earnings through a work-from-home part-time job. The incident has been registered at the Mangaluru Rural Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm