ಬ್ರೇಕಿಂಗ್ ನ್ಯೂಸ್
07-07-25 10:31 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು 6.50 ಲಕ್ಷ ರೂ. ಕಳಕೊಂಡ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 25ರಂದು ವಾಟ್ಸಪ್ ನಲ್ಲಿ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ಟೆಲಿಗ್ರಾಮ್ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಆನಂತರ ಮತ್ತೆರಡು ಲಿಂಕ್ ಕಳುಹಿಸಿದ್ದು, ಅದರ ಮೂಲಕ 20 ವರ್ಕ್ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ್ದರು. ಇದಕ್ಕೂ ಮೊದಲು ವರ್ಕಿಂಗ್ ಐಡಿ ನಂಬರ್ ಕೊಡುವುದಕ್ಕಾಗಿ ಬ್ಯಾಂಕ್ ಖಾತೆ ವಿವರಗಳನ್ನು ನೀಡುವಂತೆ ಸೂಚಿಸಿದ್ದರು.
ಪ್ರತಿ ಟಾಸ್ಕ್ ಮುಗಿಸಿದಾಗ ಖಾತೆಗೆ 180 ರೂ. ಹಣ ಹಾಕುವುದಾಗಿ ಹೇಳಿದ್ದರು. ಆನಂತರ, ಇಂತಿಷ್ಟು ಹಣ ಕಟ್ಟಿ ಟಾಸ್ಕ್ ಪೂರೈಸಿದರೆ ದುಪ್ಪಟ್ಟು ಹಣ ಸಿಗುವುದಾಗಿ ನಂಬಿಸಿದ್ದಾರೆ. ಅದರಂತೆ, ಈ ವ್ಯಕ್ತಿ ಅಪರಿಚಿರು ಹೇಳಿದ ರೀತಿಯಲ್ಲೇ ಹಣ ಪಾವತಿಸಿದ್ದರು. ಮತ್ತಷ್ಟು ಹಣ ಹಾಕಿದರೆ ಡಬಲ್ ಆಗುವುದಾಗಿ ನಂಬಿಸಿದ್ದು ಮತ್ತು ಅದರ ತೆರಿಗೆಯೆಂದು ಹೇಳಿ ಇನ್ನಷ್ಟು ಹಣ ಕೇಳಿದ್ದರು. ಅದೇ ಪ್ರಕಾರ ಹಂತ ಹಂತವಾಗಿ 6.50 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಅಲ್ಲಿ ವರೆಗೂ ಈ ವ್ಯಕ್ತಿಗೆ 380 ರೂ. ಮಾತ್ರ ಮರಳಿ ಸಿಕ್ಕಿತ್ತು. ಹಣವನ್ನು ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟುವಂತೆ ಹೇಳಿದ್ದು ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
A man from Mangaluru has reportedly lost ₹6.5 lakh after falling victim to an online scam that promised earnings through a work-from-home part-time job. The incident has been registered at the Mangaluru Rural Police Station.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm