ಬ್ರೇಕಿಂಗ್ ನ್ಯೂಸ್
07-07-25 10:31 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು 6.50 ಲಕ್ಷ ರೂ. ಕಳಕೊಂಡ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 25ರಂದು ವಾಟ್ಸಪ್ ನಲ್ಲಿ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ಟೆಲಿಗ್ರಾಮ್ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಆನಂತರ ಮತ್ತೆರಡು ಲಿಂಕ್ ಕಳುಹಿಸಿದ್ದು, ಅದರ ಮೂಲಕ 20 ವರ್ಕ್ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ್ದರು. ಇದಕ್ಕೂ ಮೊದಲು ವರ್ಕಿಂಗ್ ಐಡಿ ನಂಬರ್ ಕೊಡುವುದಕ್ಕಾಗಿ ಬ್ಯಾಂಕ್ ಖಾತೆ ವಿವರಗಳನ್ನು ನೀಡುವಂತೆ ಸೂಚಿಸಿದ್ದರು.
ಪ್ರತಿ ಟಾಸ್ಕ್ ಮುಗಿಸಿದಾಗ ಖಾತೆಗೆ 180 ರೂ. ಹಣ ಹಾಕುವುದಾಗಿ ಹೇಳಿದ್ದರು. ಆನಂತರ, ಇಂತಿಷ್ಟು ಹಣ ಕಟ್ಟಿ ಟಾಸ್ಕ್ ಪೂರೈಸಿದರೆ ದುಪ್ಪಟ್ಟು ಹಣ ಸಿಗುವುದಾಗಿ ನಂಬಿಸಿದ್ದಾರೆ. ಅದರಂತೆ, ಈ ವ್ಯಕ್ತಿ ಅಪರಿಚಿರು ಹೇಳಿದ ರೀತಿಯಲ್ಲೇ ಹಣ ಪಾವತಿಸಿದ್ದರು. ಮತ್ತಷ್ಟು ಹಣ ಹಾಕಿದರೆ ಡಬಲ್ ಆಗುವುದಾಗಿ ನಂಬಿಸಿದ್ದು ಮತ್ತು ಅದರ ತೆರಿಗೆಯೆಂದು ಹೇಳಿ ಇನ್ನಷ್ಟು ಹಣ ಕೇಳಿದ್ದರು. ಅದೇ ಪ್ರಕಾರ ಹಂತ ಹಂತವಾಗಿ 6.50 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಅಲ್ಲಿ ವರೆಗೂ ಈ ವ್ಯಕ್ತಿಗೆ 380 ರೂ. ಮಾತ್ರ ಮರಳಿ ಸಿಕ್ಕಿತ್ತು. ಹಣವನ್ನು ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟುವಂತೆ ಹೇಳಿದ್ದು ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
A man from Mangaluru has reportedly lost ₹6.5 lakh after falling victim to an online scam that promised earnings through a work-from-home part-time job. The incident has been registered at the Mangaluru Rural Police Station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm