ಬ್ರೇಕಿಂಗ್ ನ್ಯೂಸ್
07-07-25 10:31 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು 6.50 ಲಕ್ಷ ರೂ. ಕಳಕೊಂಡ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 25ರಂದು ವಾಟ್ಸಪ್ ನಲ್ಲಿ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ಟೆಲಿಗ್ರಾಮ್ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಆನಂತರ ಮತ್ತೆರಡು ಲಿಂಕ್ ಕಳುಹಿಸಿದ್ದು, ಅದರ ಮೂಲಕ 20 ವರ್ಕ್ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ್ದರು. ಇದಕ್ಕೂ ಮೊದಲು ವರ್ಕಿಂಗ್ ಐಡಿ ನಂಬರ್ ಕೊಡುವುದಕ್ಕಾಗಿ ಬ್ಯಾಂಕ್ ಖಾತೆ ವಿವರಗಳನ್ನು ನೀಡುವಂತೆ ಸೂಚಿಸಿದ್ದರು.
ಪ್ರತಿ ಟಾಸ್ಕ್ ಮುಗಿಸಿದಾಗ ಖಾತೆಗೆ 180 ರೂ. ಹಣ ಹಾಕುವುದಾಗಿ ಹೇಳಿದ್ದರು. ಆನಂತರ, ಇಂತಿಷ್ಟು ಹಣ ಕಟ್ಟಿ ಟಾಸ್ಕ್ ಪೂರೈಸಿದರೆ ದುಪ್ಪಟ್ಟು ಹಣ ಸಿಗುವುದಾಗಿ ನಂಬಿಸಿದ್ದಾರೆ. ಅದರಂತೆ, ಈ ವ್ಯಕ್ತಿ ಅಪರಿಚಿರು ಹೇಳಿದ ರೀತಿಯಲ್ಲೇ ಹಣ ಪಾವತಿಸಿದ್ದರು. ಮತ್ತಷ್ಟು ಹಣ ಹಾಕಿದರೆ ಡಬಲ್ ಆಗುವುದಾಗಿ ನಂಬಿಸಿದ್ದು ಮತ್ತು ಅದರ ತೆರಿಗೆಯೆಂದು ಹೇಳಿ ಇನ್ನಷ್ಟು ಹಣ ಕೇಳಿದ್ದರು. ಅದೇ ಪ್ರಕಾರ ಹಂತ ಹಂತವಾಗಿ 6.50 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಅಲ್ಲಿ ವರೆಗೂ ಈ ವ್ಯಕ್ತಿಗೆ 380 ರೂ. ಮಾತ್ರ ಮರಳಿ ಸಿಕ್ಕಿತ್ತು. ಹಣವನ್ನು ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟುವಂತೆ ಹೇಳಿದ್ದು ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
A man from Mangaluru has reportedly lost ₹6.5 lakh after falling victim to an online scam that promised earnings through a work-from-home part-time job. The incident has been registered at the Mangaluru Rural Police Station.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm