ಬ್ರೇಕಿಂಗ್ ನ್ಯೂಸ್
09-07-25 10:56 pm Mangalore Correspondent ಕ್ರೈಂ
ಮಂಗಳೂರು, ಜುಲೈ 9 : ಗಾಂಜಾ ಮತ್ತು ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮೂಲದ ಮೂವರನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶ ರಾಜ್ಯದ ಬರ್ವಾನಿ ಜಿಲ್ಲೆಯ ಮಾಯಾರಾಮ್ (32), ಮಹಾರಾಷ್ಟ್ರ ರಾಜ್ಯದ ಜಲಗಾಂವ್ ಜಿಲ್ಲೆಯ ನಿವಾಸಿ ಪ್ರೇಮಸಿಂಗ್ ರಾಮ ಪವಾರ (48), ಅದೇ ಜಿಲ್ಲೆಯ ನಿವಾಸಿ ಅನಿಲ್ ಪ್ರಕಾಶ್ ಕೋಲಿ (35) ಬಂಧಿತರು. ಇವರ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 31/2025 ಕಲಂ. 8(c),20(b)(ii)(B) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತಗಳನ್ನು ಮಂಗಳೂರು ನಗರಕ್ಕೆ ಪೂರೈಕೆ ಮಾಡುವ ಆರು ಜನರನ್ನು ಪತ್ತೆ ಮಾಡಿ ಈಗಾಗಲೇ ದಸ್ತಗಿರಿ ಕ್ರಮ ಕೈಗೊಂಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
ಪ್ರಕರಣ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತು ಸರಬರಾಜು ಆಗುತ್ತಿರುವ ಮಾಹಿತಿ ತಿಳಿದುಬಂದಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಕ್ಕೆ ವಿಶೇಷ ತಂಡವನ್ನು ಕಳುಹಿಸಿ ಮತ್ತೆ ಮೂರು ಜನ ಆರೋಪಿಗಳನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ. ಆರೋಪಿತರು ಕೃತ್ಯಕ್ಕೆ ಬಳಸಿದ 03 ಮೊಬೈಲ್ ಫೋನ್ ಹಾಗೂ ನಗದು ಹಣ ರೂ.1,78,920/- ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತನಿಖೆ ಮುಂದುವರೆದಿದ್ದು ಇನ್ನುಳಿದ ಆರೋಪಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು. ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಸೆನ್ ಕ್ರೈಂ ಪೊಲೀಸ್ ಠಾಣಾ ಮತ್ತು ಮಂಗಳೂರು ನಗರದ ವಿಶೇಷ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿರುತ್ತಾರೆ.
In a major breakthrough in the ongoing crackdown on narcotics, the Mangaluru City Police have arrested three more individuals linked to a drug supply network operating between Maharashtra, Madhya Pradesh, and Mangaluru.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm