ಬ್ರೇಕಿಂಗ್ ನ್ಯೂಸ್
10-07-25 12:04 pm HK News Desk ಕ್ರೈಂ
ಹಾಸನ, ಜು 10 : ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.
ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ.
ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದ. ಇದೇ ವಿಚಾರವಾಗಿ ಕೋಪಗೊಂಡಿದ್ದ ಮೋಹನ್, ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಮಲಗಿದ್ದ ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ತಂದೆ ದೇವೇಗೌಡ ಅವರು ಹಿರಿಯ ಮಗ ಮಂಜುನಾಥ್ ಮೇಲೆ ಹಲ್ಲೆಯಾಗುತ್ತಿರುವುದನ್ನು ತಡೆಯಲು ಬಂದಿದ್ದರು. ಈ ವೇಳೆ ಮೋಹನ್, ತಂದೆಯ ಮೇಲೆಯೂ ಮಚ್ಚಿನಿಂದ ಹಲ್ಲೆ ಮಾಡಿದ್ದ. ಮಗನನ್ನ ತಡೆಯಲು ಬಂದ ತಾಯಿ ಜಯಮ್ಮನ ಮೇಲೂ ಮೋಹನ್ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಜಯಮ್ಮ, ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡು, ರಾತ್ರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು.
ತಂದೆ ಹಾಗೂ ಸಹೋದರ ಕೊಲೆ ಮಾಡಿ ಮನೆಯ ಮತ್ತೊಂದು ಭಾಗದಲ್ಲಿ ಮಲಗಿದ್ದ. ನನಗೆ ಏಟಾಗಿದೆ ಬಂದು ಆಸ್ಪತ್ರೆಗೆ ಸೇರಿಸು ಎಂದು ಅಕ್ಕನಿಗೆ ಫೋನ್ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಅಕ್ಕ ಮನೆಗೆ ಬಂದು ನೋಡಿದಾಗ ತಂದೆ ಮತ್ತು ಅಣ್ಣನ ಹೆಣ ಬಿದ್ದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a shocking incident stemming from a property dispute, a man brutally murdered his father and elder brother in Ganguru village of Holenarasipura taluk, Hassan district.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm