ಬ್ರೇಕಿಂಗ್ ನ್ಯೂಸ್
10-07-25 12:04 pm HK News Desk ಕ್ರೈಂ
ಹಾಸನ, ಜು 10 : ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.
ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ.

ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದ. ಇದೇ ವಿಚಾರವಾಗಿ ಕೋಪಗೊಂಡಿದ್ದ ಮೋಹನ್, ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಮಲಗಿದ್ದ ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ತಂದೆ ದೇವೇಗೌಡ ಅವರು ಹಿರಿಯ ಮಗ ಮಂಜುನಾಥ್ ಮೇಲೆ ಹಲ್ಲೆಯಾಗುತ್ತಿರುವುದನ್ನು ತಡೆಯಲು ಬಂದಿದ್ದರು. ಈ ವೇಳೆ ಮೋಹನ್, ತಂದೆಯ ಮೇಲೆಯೂ ಮಚ್ಚಿನಿಂದ ಹಲ್ಲೆ ಮಾಡಿದ್ದ. ಮಗನನ್ನ ತಡೆಯಲು ಬಂದ ತಾಯಿ ಜಯಮ್ಮನ ಮೇಲೂ ಮೋಹನ್ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಜಯಮ್ಮ, ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡು, ರಾತ್ರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು.
ತಂದೆ ಹಾಗೂ ಸಹೋದರ ಕೊಲೆ ಮಾಡಿ ಮನೆಯ ಮತ್ತೊಂದು ಭಾಗದಲ್ಲಿ ಮಲಗಿದ್ದ. ನನಗೆ ಏಟಾಗಿದೆ ಬಂದು ಆಸ್ಪತ್ರೆಗೆ ಸೇರಿಸು ಎಂದು ಅಕ್ಕನಿಗೆ ಫೋನ್ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಅಕ್ಕ ಮನೆಗೆ ಬಂದು ನೋಡಿದಾಗ ತಂದೆ ಮತ್ತು ಅಣ್ಣನ ಹೆಣ ಬಿದ್ದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a shocking incident stemming from a property dispute, a man brutally murdered his father and elder brother in Ganguru village of Holenarasipura taluk, Hassan district.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm