ಬ್ರೇಕಿಂಗ್ ನ್ಯೂಸ್
10-07-25 12:04 pm HK News Desk ಕ್ರೈಂ
ಹಾಸನ, ಜು 10 : ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.
ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ.
ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದ. ಇದೇ ವಿಚಾರವಾಗಿ ಕೋಪಗೊಂಡಿದ್ದ ಮೋಹನ್, ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಮಲಗಿದ್ದ ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ತಂದೆ ದೇವೇಗೌಡ ಅವರು ಹಿರಿಯ ಮಗ ಮಂಜುನಾಥ್ ಮೇಲೆ ಹಲ್ಲೆಯಾಗುತ್ತಿರುವುದನ್ನು ತಡೆಯಲು ಬಂದಿದ್ದರು. ಈ ವೇಳೆ ಮೋಹನ್, ತಂದೆಯ ಮೇಲೆಯೂ ಮಚ್ಚಿನಿಂದ ಹಲ್ಲೆ ಮಾಡಿದ್ದ. ಮಗನನ್ನ ತಡೆಯಲು ಬಂದ ತಾಯಿ ಜಯಮ್ಮನ ಮೇಲೂ ಮೋಹನ್ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಜಯಮ್ಮ, ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡು, ರಾತ್ರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು.
ತಂದೆ ಹಾಗೂ ಸಹೋದರ ಕೊಲೆ ಮಾಡಿ ಮನೆಯ ಮತ್ತೊಂದು ಭಾಗದಲ್ಲಿ ಮಲಗಿದ್ದ. ನನಗೆ ಏಟಾಗಿದೆ ಬಂದು ಆಸ್ಪತ್ರೆಗೆ ಸೇರಿಸು ಎಂದು ಅಕ್ಕನಿಗೆ ಫೋನ್ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಅಕ್ಕ ಮನೆಗೆ ಬಂದು ನೋಡಿದಾಗ ತಂದೆ ಮತ್ತು ಅಣ್ಣನ ಹೆಣ ಬಿದ್ದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a shocking incident stemming from a property dispute, a man brutally murdered his father and elder brother in Ganguru village of Holenarasipura taluk, Hassan district.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm