ಬ್ರೇಕಿಂಗ್ ನ್ಯೂಸ್
10-07-25 12:04 pm HK News Desk ಕ್ರೈಂ
ಹಾಸನ, ಜು 10 : ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.
ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ.

ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದ. ಇದೇ ವಿಚಾರವಾಗಿ ಕೋಪಗೊಂಡಿದ್ದ ಮೋಹನ್, ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಮಲಗಿದ್ದ ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ತಂದೆ ದೇವೇಗೌಡ ಅವರು ಹಿರಿಯ ಮಗ ಮಂಜುನಾಥ್ ಮೇಲೆ ಹಲ್ಲೆಯಾಗುತ್ತಿರುವುದನ್ನು ತಡೆಯಲು ಬಂದಿದ್ದರು. ಈ ವೇಳೆ ಮೋಹನ್, ತಂದೆಯ ಮೇಲೆಯೂ ಮಚ್ಚಿನಿಂದ ಹಲ್ಲೆ ಮಾಡಿದ್ದ. ಮಗನನ್ನ ತಡೆಯಲು ಬಂದ ತಾಯಿ ಜಯಮ್ಮನ ಮೇಲೂ ಮೋಹನ್ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಜಯಮ್ಮ, ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡು, ರಾತ್ರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು.
ತಂದೆ ಹಾಗೂ ಸಹೋದರ ಕೊಲೆ ಮಾಡಿ ಮನೆಯ ಮತ್ತೊಂದು ಭಾಗದಲ್ಲಿ ಮಲಗಿದ್ದ. ನನಗೆ ಏಟಾಗಿದೆ ಬಂದು ಆಸ್ಪತ್ರೆಗೆ ಸೇರಿಸು ಎಂದು ಅಕ್ಕನಿಗೆ ಫೋನ್ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಅಕ್ಕ ಮನೆಗೆ ಬಂದು ನೋಡಿದಾಗ ತಂದೆ ಮತ್ತು ಅಣ್ಣನ ಹೆಣ ಬಿದ್ದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a shocking incident stemming from a property dispute, a man brutally murdered his father and elder brother in Ganguru village of Holenarasipura taluk, Hassan district.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm