ಬ್ರೇಕಿಂಗ್ ನ್ಯೂಸ್
10-07-25 12:04 pm HK News Desk ಕ್ರೈಂ
ಹಾಸನ, ಜು 10 : ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.
ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ.
ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದ. ಇದೇ ವಿಚಾರವಾಗಿ ಕೋಪಗೊಂಡಿದ್ದ ಮೋಹನ್, ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಮಲಗಿದ್ದ ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ತಂದೆ ದೇವೇಗೌಡ ಅವರು ಹಿರಿಯ ಮಗ ಮಂಜುನಾಥ್ ಮೇಲೆ ಹಲ್ಲೆಯಾಗುತ್ತಿರುವುದನ್ನು ತಡೆಯಲು ಬಂದಿದ್ದರು. ಈ ವೇಳೆ ಮೋಹನ್, ತಂದೆಯ ಮೇಲೆಯೂ ಮಚ್ಚಿನಿಂದ ಹಲ್ಲೆ ಮಾಡಿದ್ದ. ಮಗನನ್ನ ತಡೆಯಲು ಬಂದ ತಾಯಿ ಜಯಮ್ಮನ ಮೇಲೂ ಮೋಹನ್ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಜಯಮ್ಮ, ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡು, ರಾತ್ರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು.
ತಂದೆ ಹಾಗೂ ಸಹೋದರ ಕೊಲೆ ಮಾಡಿ ಮನೆಯ ಮತ್ತೊಂದು ಭಾಗದಲ್ಲಿ ಮಲಗಿದ್ದ. ನನಗೆ ಏಟಾಗಿದೆ ಬಂದು ಆಸ್ಪತ್ರೆಗೆ ಸೇರಿಸು ಎಂದು ಅಕ್ಕನಿಗೆ ಫೋನ್ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಅಕ್ಕ ಮನೆಗೆ ಬಂದು ನೋಡಿದಾಗ ತಂದೆ ಮತ್ತು ಅಣ್ಣನ ಹೆಣ ಬಿದ್ದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a shocking incident stemming from a property dispute, a man brutally murdered his father and elder brother in Ganguru village of Holenarasipura taluk, Hassan district.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm