ಬ್ರೇಕಿಂಗ್ ನ್ಯೂಸ್
10-07-25 08:09 pm HK News Desk ಕ್ರೈಂ
ರಾಮನಗರ ಜು.10: ಮನೆಯಲ್ಲಿ ಒಂಟಿಯಾಗಿ ಇದ್ದ 14 ವರ್ಷದ ಬಾಲಕಿಯ ಮೇಲೆ ಆತ್ಯಚಾರವೆಸಗಿ ನಂತರ ಆಕೆಯನ್ನ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ ನಗರದಲ್ಲಿ ನಡೆದಿದೆ.
ಘಟನೆ ನಡೆದ ಕೆಲವೇ ತಾಸುಗಳಲ್ಲಿ ಆರೋಪಿ ಯಲ್ಲಪ್ಪ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಯಚೂರು ಜಿಲ್ಲೆಯ 25 ವರ್ಷದ ಯಲ್ಲಪ್ಪ ಕಟ್ಟಡ ಕಾರ್ಮಿಕ. ತಾವರೆಕೆರೆಯಲ್ಲಿ ಒಬ್ಬನೇ ನೆಲೆಸಿದ್ದ ಆರೋಪಿ, ಬಾಲಕಿ ಮನೆ ಬಳಿ ಆಗಾಗ ಬಂದು ಹೋಗುತ್ತಿದ್ದ. ದಂಪತಿ ಕೆಲಸಕ್ಕೆ ಮತ್ತು ಅವರ ಮಕ್ಕಳು ಶಾಲೆಗೆ ಹೋದ ನಂತರ, ಬಾಲಕಿ ಒಬ್ಬಳೇ ಮನೆಯಲ್ಲಿರುವುದನ್ನು ಅರಿತಿದ್ದ.
ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ಬೈಕ್ನಲ್ಲಿ ಬಾಲಕಿ ಮನೆಗೆ ಬಂದಿದ್ದ ಆರೋಪಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಬಲವಾದ ಪ್ರತಿರೋಧ ತೋರಿ ಕೂಗಿಕೊಳ್ಳಲು ಯತ್ನಿಸಿದ್ದಾಳೆ. ಆಗ ಆರೋಪಿ, ಎಲ್ಲಿ ತಾನು ಸಿಕ್ಕಿ ಬೀಳುತ್ತೆನೊ ಎಂಬ ಭಯದಿಂದ ಮನೆಯೊಳಗೆ ಇದ್ದ ದೊಣ್ಣೆಯಿಂದ ತಲೆ ಮತ್ತು ಮುಖಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
ಕೃತ್ಯದ ಬಳಿಕ ಮನೆಯಿಂದ ಹಾಗೆಯೇ ಹೋದರೆ ಯಾರಿಗಾದರೂ ಅನುಮಾನ ಬರಲಿದೆ ಅಂದುಕೊಂಡು, ಒಳಗಿದ್ದ ಸಿಲಿಂಡರ್ ತೆಗೆದುಕೊಂಡು ಹೋಗಿದ್ದಾನೆ. ಮಧ್ಯಾಹ್ನ 2ರ ಸುಮಾರಿಗೆ ಬಾಲಕಿ ಸಹೋದರ ಮನೆಗೆ ಬಂದಾಗ ತನ್ನ ಅಕ್ಕ ಅರೆ ನಗ್ನಾವಸ್ಥೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದ.
ಸುಳಿವು ಕೊಟ್ಟ ಕ್ಯಾಮೆರಾ ;
ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಯಿತು. ಆಗ ಆರೋಪಿ ಯಲ್ಲಪ್ಪ ಬೈಕ್ನಲ್ಲಿ ಮನೆ ಬಳಿ ಬಂದು, ಕೆಲ ನಿಮಿಷದ ಬಳಿಕ ಅನುಮಾನಾಸ್ಪದವಾಗಿ ಸಿಲಿಂಡರ್ನೊಂದಿಗೆ ಹೋಗುವುದು ಗೊತ್ತಾಯಿತು. ಆತನ ಮಾಹಿತಿ ವಿವರ ಕಲೆಹಾಕಿ ರಾತ್ರಿಯೇ ಆತನನ್ನು ವಶಕ್ಕೆ ಪಡೆಯಲಾಗಿದೆ.
In a horrifying incident near Bengaluru, a 14-year-old girl was brutally raped and murdered in Tavarekere town while she was alone at home. The accused, identified as 25-year-old Yallappa, was arrested by police within hours of the crime, thanks to a key clue involving a stolen gas cylinder.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm