ಬ್ರೇಕಿಂಗ್ ನ್ಯೂಸ್
11-07-25 10:10 pm HK News Desk ಕ್ರೈಂ
ಕಲಬುರಗಿ, ಜುಲೈ 11: ಕಲಬುರಗಿಯಲ್ಲಿ ಹಾಡಹಗಲೇ ಚಿನ್ನಾಭರಣ ತಯಾರಿಕಾ ಅಂಗಡಿಯನ್ನು ದೋಚಲಾಗಿದೆ. ನಗರದ ಸರಾಫ್ ಬಜಾರ್ನಲ್ಲಿ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನುಗ್ಗಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆ ಮಾಡಿರುವ ಘಟನೆ ನಡೆದಿದೆ.
ಮಾಲಿಕ್ ಎಂಬ ಹೆಸರಿನ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನಾಲ್ವರು ಮುಸುಕುಧಾರಿ ದರೋಡೆಕೋರರು ಗನ್ ಹಾಗೂ ಚಾಕು ಸಹಿತ ನುಗ್ಗಿ, ಅಂಗಡಿ ಮಾಲಿಕರಿಗೆ ಬೆದರಿಕೆ ಹಾಕಿದ್ದಾರೆ. ನಂತರ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿದ್ದಾರೆ. ಅಂದಾಜು 3 ಕೆಜಿಯಷ್ಟು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದರೋಡೆಕೋರರ ಬಂಧನಕ್ಕೆ ಬಲೆ
ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಪ್ರತಿಕ್ರಿಯಿಸಿದ್ದು, 'ಪ್ರಕರಣಕ್ಕೆ ಸಂಬಂಧಿಸಿದಂತೆ ಬೆರಳಚ್ಚು ತಜ್ಞರು ಹಾಗೂ ಡಾಗ್ ಸ್ಕ್ವಾಡ್ ಕರೆಸಿ ಪರಿಶೀಲನೆ ನಡೆಸಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಪೊಲೀಸರ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ದುಷ್ಕರ್ಮಿಗಳ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ದರೋಡೆಕೋರರ ಕೈಗೆ ಸಿಲುಕಿದ ವ್ಯಕ್ತಿಯ ಸಹೋದರ ಮರ್ತುಲ್ಲಾ ಮಾಲಿಕ್, ನನ್ನ ಸಹೋದರ ಸುಮಾರು 12 ಗಂಟೆ ವೇಳೆಗೆ ಅಂಗಡಿ ಬಾಗಿಲು ತೆರೆದು ಕುರ್ಚಿಯಲ್ಲಿ ಕುಳಿತಿದ್ದರು. ಆಗ ನಾಲ್ಕು ಜನ ಮುಸುಕುಧಾರಿಗಳು ನಮ್ಮ ಅಂಗಡಿಗೆ ನುಗ್ಗಿದ್ದರು. ಅದರಲ್ಲಿ ಇಬ್ಬರು ಬಂದೂಕು ತೋರಿಸಿ ಬೆದರಿಸಿದ್ದರು, ಅಷ್ಟರಲ್ಲಿ ಮತ್ತೊಬ್ಬ ಚಾಕು ತೋರಿಸಿದ್ದ, ಆ ಬಳಿಕ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿ, ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಘಟನೆ ಬಗ್ಗೆ ಮಾಹಿತಿ ನೀಡಿದರು.
In a shocking daylight heist, a group of masked robbers stormed into a gold ornament manufacturing unit in Saraf Bazaar, Kalaburagi, and looted gold and cash worth crores.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm