ಬ್ರೇಕಿಂಗ್ ನ್ಯೂಸ್
12-07-25 11:59 am Mangalore Correspondent ಕ್ರೈಂ
ಮಂಗಳೂರು, ಜುಲೈ.12: ವಿದೇಶದಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ 250ಕ್ಕೂ ಹೆಚ್ಚು ಮಂದಿಯಲ್ಲಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬಂಧಿತರಾದ ಮುಂಬೈ ಮೂಲದ ಮೂವರು ಆರೋಪಿಗಳ ವಿರುದ್ಧ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕೋಕಾ ಏಕ್ಟಿನಡಿ ಕೇಸು ದಾಖಲಿಸಿದ್ದಾರೆ.
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಬಗ್ಗೆ ಮಂಗಳೂರಿನ ಕದ್ರಿ ಠಾಣೆಯಲ್ಲಿ ಮತ್ತು ನವಿ ಮುಂಬೈನಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳು ಸಂಘಟಿತ ನೆಲೆಯಲ್ಲಿ ಅಪರಾಧ ನಡೆಸುತ್ತಿದ್ದಾರೆಂಬ ಆಧಾರದಲ್ಲಿ ಕರ್ನಾಟಕ ಕೋಕಾ ಏಕ್ಟ್ ಅಡಿ ಕೇಸು ದಾಖಲಿಸಲು ಕಮಿಷನರ್ ಸೂಚಿಸಿದ್ದಾರೆ. ಎರಡಕ್ಕಿಂತ ಹೆಚ್ಚು ಕಡೆ ಅಪರಾಧ ಪ್ರಕರಣ ದಾಖಲಾದರೆ ಕೋಕಾ ಏಕ್ಟ್ ಜಾರಿಗೊಳಿಸಬಹುದು. ಇದರ ಪ್ರಕಾರ, ಪೊಲೀಸರಿಗೆ ಮತ್ತಷ್ಟು ಬಲ ಬರುತ್ತದೆ. ಯಾರೇ ಆಗಲಿ ಎರಡಕ್ಕಿಂತ ಹೆಚ್ಚು ಕಡೆ ಕೇಸು ದಾಖಲಾದವರು ಜಾಗ್ರತೆಯಲ್ಲಿರಿ ಎಂದು ಕಮಿಷನರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಇತ್ತೀಚೆಗೆ ಸಿಸಿಬಿ ಪೊಲೀಸರು ನವಿ ಮುಂಬೈನ ಕೋಪರ್ ಕೈರಾನೆ ನಿವಾಸಿ ದಿಲ್ ಶಾದ್ ಅಬ್ದುಲ್ ಸತ್ತಾರ್ ಖಾನ್ (45) ಮತ್ತು ಥಾಣೆಯ ದೊಂಬಿವಿಲಿ ನಿವಾಸಿ ಕಿಶೋರ್ ಕುಮಾರ್ ಅಲಿಯಾಸ್ ಅನಿಲ್ ಕುಮಾರ್ (34) ಎಂಬವರನ್ನು ಬಂಧಿಸಲಾಗಿತ್ತು. ಇದಕ್ಕೂ ಹಿಂದೆ ಮುಂಬೈ ಮೂಲದ ಮಸೀವುಲ್ಲಾ ಖಾನ್ ಎಂಬಾತನನ್ನು ಬಂಧನ ಮಾಡಿದ್ದರು. ಇದೀಗ ಮೂವರ ವಿರುದ್ಧವೂ ಕೋಕಾ ಕಾಯ್ದೆಯಡಿ ಕೇಸು ದಾಖಲಾಗಿದೆ.
ಏನಿದು ಕೋಕಾ ಕಾಯ್ದೆ ?
ಸಂಘಟಿತ ಅಪರಾಧಗಳ ನಿಯಂತ್ರ ಕಾಯ್ದೆ 2000 ಪ್ರಕಾರ, ಕೇಸು ದಾಖಲಾದರೆ ಪೊಲೀಸರಿಗೆ ಆರೋಪಿಗಳ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಲು ಅವಕಾಶ ಸಿಗುತ್ತದೆ. ಆರೋಪಿಗಳನ್ನು ಒಂದು ತಿಂಗಳಿಗೂ ಹೆಚ್ಚು ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಳ್ಳಲು ಮತ್ತು 180 ದಿನಗಳ ಕಾಲ ಜೈಲಿನಲ್ಲಿರಿಸಲು ಅವಕಾಶ ಇರುತ್ತದೆ. ಹೀಗಾಗಿ ಆರೋಪಿಗಳಿಗೆ ಸುಲಭದಲ್ಲಿ ಜಾಮೀನು ಲಭ್ಯವಾಗದು. ಈ ಕಾಯ್ದೆಯಡಿ ವಿಶೇಷ ನ್ಯಾಯಾಲಯದಡಿ ಕೇಸು ದಾಖಲಿಸಲು ಅವಕಾಶ ಇದೆ. ಸಂಘಟಿತ ಅಪರಾಧ ಮತ್ತು ಭಯೋತ್ಪಾದನೆ ವಿರುದ್ಧ ಕ್ರಮ ಜರುಗಿಸಲು ಈ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ನಿಶ್ಚಿತ ಅಪರಾಧಗಳನ್ನೆಸಗಿದರೆ ಆರೋಪಿಗಳ ಆಸ್ತಿಯನ್ನು ಜಪ್ತಿ ಮಾಡಲು ಅವಕಾಶ ಇರುತ್ತದೆ. ಮಹಾರಾಷ್ಟ್ರ ಸರಕಾರ ಜಾರಿಗೆ ತಂದಿದ್ದ ಮೋಕಾ ಕಾಯ್ದೆಯನ್ನು ಮಾದರಿಯಾಗಿಟ್ಟು ಕರ್ನಾಟಕದಲ್ಲಿ ಕೋಕಾ ಏಕ್ಟ್ ತರಲಾಗಿತ್ತು.
In a major crackdown on organized crime, Mangaluru City Police Commissioner Sudheer Kumar Reddy has invoked the Karnataka Control of Organised Crimes Act (KCOCA) against three individuals from Mumbai, accused of defrauding over 250 people by promising jobs abroad and collecting lakhs of rupees from them.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm