ಬ್ರೇಕಿಂಗ್ ನ್ಯೂಸ್
15-07-25 05:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 15 : ವ್ಯಕ್ತಿಯೊಬ್ಬರ ಬಗ್ಗೆ ಕೋಮು ದ್ವೇಷ ಮೂಡಿಸುವ ರೀತಿ ಬರಹಗಳನ್ನು ಬರೆದು ಹಿಂದು ಯುವತಿಯರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ವಾಟ್ಸಪ್ ನಲ್ಲಿ ಷೇರ್ ಮಾಡಿದ್ದು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸುರತ್ಕಲ್ ಹೊಸಬೆಟ್ಟುವಿನಲ್ಲಿ ಆರ್ ವಿ ಎಂಟರ್ ಪ್ರೈಸಸ್ ಎನ್ನುವ ಹೆಸರಿನಲ್ಲಿ ಉದ್ಯಮ ನಡೆಸುತ್ತಿರುವ ರಾಜೇಶ್ ಹೊನ್ನಕಟ್ಟೆ ಎಂಬವರ ಬಗ್ಗೆ ಹಿಂದುಗಳಲ್ಲಿ ಕೋಮು ಭಾವನೆ ಕೆರಳಿಸುವ ರೀತಿ ವಾಟ್ಸಪ್ ನಲ್ಲಿ ಬರಹಳಗಳನ್ನು ಬರೆದು ಷೇರ್ ಮಾಡಿದ್ದ ಬಗ್ಗೆ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ರಾಜೇಶ್ ಅವರು ಈವರೆಗೆ 20ಕ್ಕೂ ಹೆಚ್ಚು ಯುವತಿಯರನ್ನು ಮತಾಂತರ ಮಾಡಿದ್ದಾರೆ, ಅಲ್ಲದೆ, ಬ್ಲೂಫಿಲಂ ಸಿಡಿ ಮಾಡಿ ಮಾರಾಟ ಮಾಡುತ್ತಿದ್ದಾರೆ. 24 ವರ್ಷದ ಹಿಂದು ಯುವತಿಯನ್ನು ತನ್ನ ತಮ್ಮನಿಗೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಆ ಹಿಂದು ಯುವತಿ ಹಣೆಗೆ ಕುಂಕುಮ ಹಾಕುವುದನ್ನು, ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿದ್ದು ಚರ್ಚ್ ನಲ್ಲಿ ಪ್ರಾರ್ಥನೆಗೆ ಹೋಗುತ್ತಿದ್ದಾಳೆ ಇತ್ಯಾದಿ ಸುಳ್ಳು ಆರೋಪಗಳನ್ನು ವಾಟ್ಸಪ್ ಗ್ರೂಪ್ ಗಳಲ್ಲಿ ಹರಿಯಬಿಟ್ಟಿದ್ದ.
ಪೊಲೀಸರು ತನಿಖೆ ನಡೆಸಿ ಕುಳಾಯಿ ನಿವಾಸಿ ರಾಮಪ್ರಸಾದ್ (42) ಎಂಬಾತನನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ರೌಡಿ ಕೋಡಿಕೆರೆ ಲೋಕೇಶ್ ಕೂಡ ಭಾಗಿಯಾದ ಆರೋಪ ಹೊಂದಿದ್ದು, ಸದ್ಯಕ್ಕೆ ಬೇರೊಂದು ಪ್ರಕರಣದಲ್ಲಿ ಬಂಧಿತನಾಗಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿದ್ದಾನೆ. ಸದ್ರಿ ಪ್ರಕರಣ ಸಂಬಂಧಿಸಿ ಬಾಡಿ ವಾರೆಂಟ್ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Police have arrested a man for allegedly spreading communal hatred through WhatsApp messages by making false claims that a local businessman was involved in converting Hindu women to another religion. The case has been registered at the Surathkal Police Station.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm