ಬ್ರೇಕಿಂಗ್ ನ್ಯೂಸ್
15-07-25 05:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 15 : ವ್ಯಕ್ತಿಯೊಬ್ಬರ ಬಗ್ಗೆ ಕೋಮು ದ್ವೇಷ ಮೂಡಿಸುವ ರೀತಿ ಬರಹಗಳನ್ನು ಬರೆದು ಹಿಂದು ಯುವತಿಯರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ವಾಟ್ಸಪ್ ನಲ್ಲಿ ಷೇರ್ ಮಾಡಿದ್ದು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸುರತ್ಕಲ್ ಹೊಸಬೆಟ್ಟುವಿನಲ್ಲಿ ಆರ್ ವಿ ಎಂಟರ್ ಪ್ರೈಸಸ್ ಎನ್ನುವ ಹೆಸರಿನಲ್ಲಿ ಉದ್ಯಮ ನಡೆಸುತ್ತಿರುವ ರಾಜೇಶ್ ಹೊನ್ನಕಟ್ಟೆ ಎಂಬವರ ಬಗ್ಗೆ ಹಿಂದುಗಳಲ್ಲಿ ಕೋಮು ಭಾವನೆ ಕೆರಳಿಸುವ ರೀತಿ ವಾಟ್ಸಪ್ ನಲ್ಲಿ ಬರಹಳಗಳನ್ನು ಬರೆದು ಷೇರ್ ಮಾಡಿದ್ದ ಬಗ್ಗೆ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ರಾಜೇಶ್ ಅವರು ಈವರೆಗೆ 20ಕ್ಕೂ ಹೆಚ್ಚು ಯುವತಿಯರನ್ನು ಮತಾಂತರ ಮಾಡಿದ್ದಾರೆ, ಅಲ್ಲದೆ, ಬ್ಲೂಫಿಲಂ ಸಿಡಿ ಮಾಡಿ ಮಾರಾಟ ಮಾಡುತ್ತಿದ್ದಾರೆ. 24 ವರ್ಷದ ಹಿಂದು ಯುವತಿಯನ್ನು ತನ್ನ ತಮ್ಮನಿಗೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಆ ಹಿಂದು ಯುವತಿ ಹಣೆಗೆ ಕುಂಕುಮ ಹಾಕುವುದನ್ನು, ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿದ್ದು ಚರ್ಚ್ ನಲ್ಲಿ ಪ್ರಾರ್ಥನೆಗೆ ಹೋಗುತ್ತಿದ್ದಾಳೆ ಇತ್ಯಾದಿ ಸುಳ್ಳು ಆರೋಪಗಳನ್ನು ವಾಟ್ಸಪ್ ಗ್ರೂಪ್ ಗಳಲ್ಲಿ ಹರಿಯಬಿಟ್ಟಿದ್ದ.
ಪೊಲೀಸರು ತನಿಖೆ ನಡೆಸಿ ಕುಳಾಯಿ ನಿವಾಸಿ ರಾಮಪ್ರಸಾದ್ (42) ಎಂಬಾತನನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ರೌಡಿ ಕೋಡಿಕೆರೆ ಲೋಕೇಶ್ ಕೂಡ ಭಾಗಿಯಾದ ಆರೋಪ ಹೊಂದಿದ್ದು, ಸದ್ಯಕ್ಕೆ ಬೇರೊಂದು ಪ್ರಕರಣದಲ್ಲಿ ಬಂಧಿತನಾಗಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿದ್ದಾನೆ. ಸದ್ರಿ ಪ್ರಕರಣ ಸಂಬಂಧಿಸಿ ಬಾಡಿ ವಾರೆಂಟ್ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Police have arrested a man for allegedly spreading communal hatred through WhatsApp messages by making false claims that a local businessman was involved in converting Hindu women to another religion. The case has been registered at the Surathkal Police Station.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm