ಬ್ರೇಕಿಂಗ್ ನ್ಯೂಸ್
15-07-25 10:57 pm HK News Desk ಕ್ರೈಂ
ಕೊಲ್ಲಂ, ಜುಲೈ 15 : ಗಂಡ ಮತ್ತು ಮಾವನ ಕಿರುಕುಳದಿಂದ ಬೇಸತ್ತ 32 ವರ್ಷದ ಕೇರಳ ಮೂಲದ ಮಹಿಳೆಯೊಬ್ಬಳು ತನ್ನ ಒಂದೂವರೆ ವರ್ಷದ ಮಗುವನ್ನು ಸಾಯಿಸಿ ಫೇಸ್ಬುಕ್ ನಲ್ಲಿ ಡೆತ್ ನೋಟ್ ಬರೆದು ಪೋಸ್ಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಾರ್ಜಾದಲ್ಲಿ ನಡೆದಿದ್ದು, ಈ ಬಗ್ಗೆ ಕೊಲ್ಲಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 8ರಂದು ಶಾರ್ಜಾದ ಅಅಲ್ ನಹಾದಾ ಎಂಬಲ್ಲಿ ಕೊಲ್ಲಂ ಮೂಲದ ಮಹಿಳೆ ವೈಪಂಜಿಕಾ ಮಣಿ ತನ್ನ ಒಂದೂವರೆ ವರ್ಷದ ಪುತ್ರಿ ವೈಭವಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್ ನೋಟ್ ಬರೆದು ತನ್ನ ಫೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದು, ಇದರಂತೆ ಗಂಡ, ಮಾವ ಮತ್ತು ಗಂಡನ ಅಕ್ಕನ ವಿರುದ್ಧ ಕ್ರಮಕ್ಕಾಗಿ ಒತ್ತಾಯಿಸಿದ್ದಾಳೆ. ಇದನ್ನು ಆಧರಿಸಿ ಯುವತಿ ತಾಯಿ ಕೊಲ್ಲಂ ಪೊಲೀಸರಿಗೆ ದೂರು ನೀಡಿದ್ದಾರೆ. ವೈಪಂಜಿಕಾ ಅವರ ಪತಿ ನಿದೀಶ್, ಆತನ ಅಕ್ಕ ನೀತು ಮತ್ತು ಮಾವನ ವಿರುದ್ಧ ಪ್ರಕರಣ ದಾಖಲಾಗಿದೆ.



ಹೆಚ್ಚಿನ ವರದಕ್ಷಿಣೆ ತರುವಂತೆ ಪೀಡಿಸಿ ದೈಹಿಕವಾಗಿ ಹಲ್ಲೆ ನಡೆಸುತ್ತಿದ್ದ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ. ಇದೇ ಕಾರಣಕ್ಕೆ ಮಗಳು ಸಾವು ಕಂಡಿದ್ದಾಳೆಂದು ತಾಯಿ ದೂರು ನೀಡಿದ್ದಾರೆ. ವೈಪಂಜಿಕಾ ಮಣಿ ನೋಡಲು ಶ್ವೇತವರ್ಣದ ಸ್ಫುರದ್ರೂಪಿ ಹೆಣ್ಮಗಳಾಗಿದ್ದು, ಪತಿ ನಿದೀಶ್ ಮತ್ತು ಆತನ ಕುಟುಂಬಸ್ಥರು ನೋಡಲು ಕಪ್ಪಗಿದ್ದು, ಅಷ್ಟು ಆಕರ್ಷಕವಾಗಿರಲಿಲ್ಲ. ಈಕೆ ಸುಂದರವಾಗಿದ್ದಾಳೆಂದು ಇನ್ಯಾರ ಜೊತೆಗೋ ಸಂಬಂಧ ಇರಿಸಿದ್ದಾಳೆಂದು ಶಂಕಿಸಿ ಪತಿ ಕಿರುಕುಳ ನೀಡುತ್ತಿದ್ದ. ಅಲ್ಲದೆ, ನೀನು ಸುಂದರವಾಗಿ ಕಾಣಬಾರದು, ಕುರೂಪಿಯಾಗಿ ಇರಬೇಕು ಎಂದು ಹೇಳಿ ಆಕೆಯ ಕೂದಲನ್ನು ಪೂರ್ತಿಯಾಗಿ ಕತ್ತರಿಸಿ ಕೇಶ ಮುಂಡನ ಮಾಡಿಸಿದ್ದ. ಡೈವರ್ಸ್ ಕೊಟ್ಟು ಬಿಡು, ನಾನು ಹೋಗುತ್ತೇನೆ ಎಂದಿದ್ದಕ್ಕೆ ಆಕೆಯನ್ನು ಮನೆಯಲ್ಲಿ ಕೂಡಿಹಾಕಿ ಕೂದಲನ್ನು ಶೇವ್ ಮಾಡಿಸಿದ್ದ.
ಕೈಬರಹದಲ್ಲಿ ಡೆತ್ ನೋಟ್ ಬರೆಯಲಾಗಿದ್ದು, ಅದನ್ನು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದಳು. ತನಗೆ ನೀಡುತ್ತಿದ್ದ ಕ್ರೂರ ಶಿಕ್ಷೆಯ ಬಗ್ಗೆ ಬರೆದುಕೊಂಡಿದ್ದು, ಮಾವ ತನ್ನ ಜೊತೆಗೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮೈಗೆ ಕೈಹಾಕಿದ್ದನ್ನು ಗಂಡನಲ್ಲಿ ಹೇಳಿದಾಗ, ನೀನು ನನಗೆ ಮಾತ್ರವಲ್ಲ, ನನ್ನ ಅಪ್ಪನಿಗೂ ಸಹಕಾರ ನೀಡಬೇಕು. ನಿನ್ನನ್ನು ನನ್ನ ಅಪ್ಪನಿಗಾಗಿ ಮದುವೆಯಾಗಿದ್ದೇನೆ ಎಂದು ಹೇಳಿದ್ದ. ಅಲ್ಲದೆ, ಮೊಬೈಲಿನಲ್ಲಿ ಕೆಲವು ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬೆಡ್ ನಲ್ಲಿ ನೀನೂ ಇದೇ ರೀತಿ ಮಾಡಬೇಕು ಎಂದು ಒತ್ತಾಯಿಸುತ್ತಿದ್ದ. ನನಗೆ ನಾಯಿ ತರ ಹೊಡೆಯುತ್ತಿದ್ದರು. ನನಗಿನ್ನು ಈ ಹಿಂಸೆಯನ್ನು ಸಹಿಸಲಾಗದು. ಆದರೆ ಇವರನ್ನು ಎಂದಿಗೂ ಹಾಗೇ ಬಿಡಬೇಡಿ. ತಕ್ಕ ಶಿಕ್ಷೆ ಕೊಡಿಸಬೇಕು ಎಂದು ಡೆತ್ ನೋಟ್ ಬರೆದಿದ್ದಾಳೆ.
ಪೊಲೀಸ್ ದೂರು ನೀಡಿರುವ ತಾಯಿ, ತನಗೇನೂ ಈ ರೀತಿಯ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿರಲಿಲ್ಲ. ಇಂತಹ ದುರುಳರಿಗೆ ಕಠಿಣ ಶಿಕ್ಷೆಯನ್ನೇ ನೀಡಬೇಕು ಎಂದಿದ್ದಾರೆ.
The Kerala police have registered a case based on a complaint filed by the mother of a woman who allegedly died by suicide, after killing her infant daughter in Sharjah, United Arab Emirates.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm