ಬ್ರೇಕಿಂಗ್ ನ್ಯೂಸ್
18-07-25 12:01 pm Mangalore Correspondent ಕ್ರೈಂ
ಮಂಗಳೂರು, ಜುಲೈ 18 : ಜಾಲತಾಣ ಬಳಸಿಕೊಂಡು ಕಂಪನಿ ಅಧಿಕಾರಿಗಳನ್ನು ಈ ರೀತಿಯೂ ಮೋಸ ಮಾಡಬಹುದು ಅನ್ನೋದಕ್ಕೆ ಸಾಕ್ಷಿಯೆನ್ನುವಂತೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಕಂಪನಿಯೊಂದರ ಎಂಡಿ ಹೆಸರಿನಲ್ಲಿ ನಕಲಿ ವಾಟ್ಸಪ್ ನಂಬರ್ ಸೃಷ್ಟಿಸಿಕೊಂಡು ಅಕೌಂಟೆಂಟ್ ಸಿಬಂದಿಯಿಂದಲೇ ಬೇರೊಂದು ಖಾತೆಗೆ 26 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿದ ಬಗ್ಗೆ ದೂರು ದಾಖಲಾಗಿದೆ.
ಕಂಪನಿಯ ಆಡಳಿತ ನಿರ್ದೇಶಕ ಅರವಿಂದ ಕುಮಾರ್ ಹೆಸರಿನಲ್ಲಿ ಸಂಸ್ಥೆಯ ಮಂಗಳೂರಿನ ಕಚೇರಿಯಲ್ಲಿ ಕೆಲಸ ಮಾಡುವ ಅಕೌಂಟೆಂಟ್ ಯುವತಿಯ ವಾಟ್ಸಪ್ ಗೆ ಜುಲೈ 15ರಂದು ಇಂಗ್ಲಿಷ್ ನಲ್ಲಿ ಮೆಸೇಜ್ ಬಂದಿತ್ತು. ಇದು ನನ್ನ ಹೊಸ ವಾಟ್ಸಪ್ ನಂಬರ್, ಸೇವ್ ಮಾಡಿಕೊಳ್ಳಿ ಎಂದಿತ್ತು. ಕಂಪನಿಯ ಹಣದ ವಹಿವಾಟು ಎಲ್ಲ ನೋಡಿಕೊಂಡಿದ್ದ ಯುವತಿ ವಾಟ್ಸಪ್ ಡಿಪಿಯಲ್ಲಿ ಅಸಲಿ ಎಂಡಿ ಅರವಿಂದ್ ಅವರದ್ದೇ ಫೋಟೋ ಇದ್ದುದರಿಂದ ಇವರದ್ದೇ ಮೆಸೇಜ್ ಎಂದು ನಂಬಿದ್ದರು. ಯುವತಿ ನಂಬರನ್ನು ಸೇವ್ ಮಾಡಿಕೊಂಡಿದ್ದರು. ಜುಲೈ 16ರಂದು ಕಂಪನಿಯ ಖಾತೆಯಲ್ಲಿ ಎಷ್ಟು ಹಣ ಇದೆಯೆಂದು ಚೆಕ್ ಮಾಡಿ ಹೇಳುವಂತೆ ಸೂಚನೆ ಬಂದಿತ್ತು. ಇತ್ತ ಯುವತಿ ಕಂಪನಿ ಖಾತೆ ಚೆಕ್ ಮಾಡಿ ಹಣ ಇರುವ ಬಗ್ಗೆಯೂ ಆ ಕುರಿತ ವಿವರಗಳನ್ನೂ ವಾಟ್ಸಪ್ ಮಾಡಿದ್ದಳು.
ಆನಂತರ, ಬೇರೊಂದು ಪ್ರಾಜೆಕ್ಟ್ ಫೈನಲ್ ಮಾಡಿದ್ದು ಮುಂಗಡ ಹಣ ನೀಡಬೇಕಿದೆ. ಅದಕ್ಕಾಗಿ ತಾನು ಕಳಿಸುವ ಯೆಸ್ ಬ್ಯಾಂಕ್ ಖಾತೆಗೆ 26 ಲಕ್ಷ ಹಣವನ್ನು ಕೂಡಲೇ ನೆಫ್ಟ್ ಮಾಡುವಂತೆ ವಾಟ್ಸಪ್ ಮೆಸೇಜ್ ಮಾಡಿ ಸೂಚಿಸಲಾಗಿತ್ತು. ಇದನ್ನು ನಂಬಿದ ಅಕೌಂಟೆಂಟ್ ಯುವತಿ, ಅಸಲಿ ಎಂಡಿ ಅರವಿಂದ್ ಅವರೇ ಈ ಸೂಚನೆ ನೀಡಿದ್ದಾರೆಂದು ಭಾವಿಸಿ 26 ಲಕ್ಷವನ್ನು ಅಪರಿಚಿತ ಸೂಚಿಸಿದ ಖಾತೆಗೆ ನೆಫ್ಟ್ ಮಾಡಿದ್ದರು. ಹಣ ವರ್ಗಾವಣೆ ಆಗಿರುವುದನ್ನು ತಿಳಿದ ಅಸಲಿ ಎಂಡಿ ಅರವಿಂದ್ ಕುಮಾರ್, ಅಕೌಂಟೆಂಟ್ ಬಳಿ ಈ ಬಗ್ಗೆ ಪ್ರಶ್ನೆ ಮಾಡಿದಾಗ ಅಪರಿಚಿತನ ಕರಾಮತ್ತು ತಿಳಿದುಬಂದಿದೆ. ಈ ಬಗ್ಗೆ ಕಂಪನಿಯ ಮ್ಯಾನೇಜರ್ ಜೆಸಿ ಪಾಟೀಲ್ ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಸದ್ರಿ ಅಕೌಂಟೆಂಟ್ ಒಂದು ವರ್ಷದಿಂದ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಯಾರು ಲೋಪ ಎಸಗಿದ್ದಾರೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a shocking case of cyber fraud, a young accountant working for a private company in Mangaluru was duped into transferring ₹26 lakh to an unknown bank account after receiving WhatsApp messages from a number impersonating the company’s Managing Director (MD).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm