ಬ್ರೇಕಿಂಗ್ ನ್ಯೂಸ್
20-07-25 12:16 pm HK News Desk ಕ್ರೈಂ
ಲಕ್ನೋ, ಜುಲೈ 19 : ಮತಾಂತರಕ್ಕೆ ವಿದೇಶಿ ಫಂಡಿಂಗ್, ಹಿಂದು ಯುವತಿಯರೇ ಟಾರ್ಗೆಟ್.. ಚಾಂಗೂರ್ ಬಾಬಾನ ಮತಾಂತರ ಜಾಲ ಪತ್ತೆ ಬೆನ್ನಲ್ಲೇ ಉತ್ತರ ಪ್ರದೇಶ ಪೊಲೀಸರು ಅಲರ್ಟ್ ಆಗಿದ್ದಾರೆ. ಮತ್ತಷ್ಟು ವಿದೇಶಿ ಹಣಕಾಸಿನ ನೆರವು ಮತ್ತು ಐಸಿಸ್ ಉಗ್ರರ ಶೈಲಿಯ ಮತಾಂತರ ದಂಧೆಯನ್ನು ಭೇದಿಸಿರುವ ಉತ್ತರ ಪ್ರದೇಶ ಪೊಲೀಸರು, ಆರು ರಾಜ್ಯಗಳಲ್ಲಿ ಹತ್ತು ಜನರನ್ನು ಬಂಧಿಸಿದ್ದಾರೆ.
ಶನಿವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕೃಷ್ಣ, ಮತಾಂತರ ದಂಧೆ ತಡೆಯುವ ನಿಟ್ಟಿನಲ್ಲಿ ಪೊಲೀಸರು 'ಮಿಷನ್ ಅಸ್ಮಿತಾ' ಕಾರ್ಯಾಚರಣೆ ಆರಂಭಿಸಿದ್ದಾರೆ. ಮತಾಂತರ ಸಿಂಡಿಕೇಟ್ ನ ಪ್ರಮುಖರಾದ ಮೊಹಮ್ಮದ್ ಉಮರ್ ಗೌತಮ್ ಮತ್ತು ಮುಫ್ತಿ ಜಹಾಂಗೀರ್ ಆಲಂ ಖಾಸ್ಮಿ ಅವರನ್ನು ಎಟಿಎಸ್ ಬಂಧಿಸಿದೆ ಎಂದು ತಿಳಿಸಿದ್ದಾರೆ.
ಜಮಾಲುದ್ದೀನ್ ಎಂದು ಕರೆಯಲ್ಪಡುವ ಛಾಂಗೂರ್ ಬಾಬಾ ನೇತೃತ್ವದ ಮತಾಂತರ ಜಾಲದ ಆರೋಪಿಗಳ ವಿಚಾರಣೆಯನ್ನು ಎಸ್ ಐಟಿ ಮತ್ತು ವಿಶೇಷ ಕಾರ್ಯಪಡೆ ನಡೆಸಿದ್ದು ಭಯಾನಕ ವಿಚಾರಗಳು ಪತ್ತೆಯಾಗಿವೆ. ಲವ್ ಜಿಹಾದ್, ಮತಾಂತರ ದಂಧೆ ನಡೆಸುವವರು, ತೀವ್ರವಾದಿಗಳು ಮತ್ತು ಜಾಗತಿಕ ಮಟ್ಟದಲ್ಲಿರುವ ಜಿಹಾದಿಗಳ ಜೊತೆಗೆ ಸೇರಿಕೊಂಡು ರಾಷ್ಟ್ರದ ಭದ್ರತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಈ ಸಂಬಂಧ ಆರು ರಾಜ್ಯಗಳಲ್ಲಿ 10 ಜನರನ್ನು ಬಂಧಿಸಲಾಗಿದೆ ಎಂದು ಡಿಜಿಪಿ ತಿಳಿಸಿದರು.
ಆರೋಪಿಗಳು ಯುವತಿಯರನ್ನು ಗುರಿಯಾಗಿಸಿದ್ದು, ಮತಾಂತರಕ್ಕೆ ಅನುಕೂಲವಾಗುವಂತೆ ಆಮಿಷವೊಡ್ಡುವುದು, ಲವ್ ಜಿಹಾದ್ ಮತ್ತಿತರ ವಿಧಾನಗಳ ಮೂಲಕ ಪ್ರಭಾವ ಬೀರಿದ್ದಾರೆ. ISIS ಶೈಲಿಯಲ್ಲಿ ಮತಾಂತರ ನಡೆಸಲಾಗುತ್ತಿದೆ. ಈ ಗುಂಪುಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಎಸ್ಡಿಪಿಐ ಮತ್ತು ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಸಾಧ್ಯತೆಗಳಿವೆ. ಈ ಮತಾಂತರ ಕಾರ್ಯಕ್ಕೆ "ಕೆನಡಾ, ಅಮೇರಿಕಾ, ಲಂಡನ್ ಮತ್ತು ದುಬೈಯಿಂದ ಹಣ ಸಂದಾಯವಾಗಿರುವುದು ಪತ್ತೆಯಾಗಿದೆ. ಮತ್ತಷ್ಟು ಮಂದಿ ಈ ಜಾಲದಲ್ಲಿ ತೊಡಗಿಸಿದ್ದು ಅವರನ್ನು ಬಂಧಿಸಲಾಗುವುದು ಎಂದು ಡಿಜಿಪಿ ಹೇಳಿದರು.
The Uttar Pradesh Police on Saturday said they have busted a large-scale illegal religious conversion racket and arrested 10 people from six states. The probe began in Agra in March after two sisters -- aged 33 and 18 -- were reported missing. Investigations revealed that they were allegedly coerced into religious conversion and were undergoing radicalization, the police said.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm