ಬ್ರೇಕಿಂಗ್ ನ್ಯೂಸ್
20-07-25 12:16 pm HK News Desk ಕ್ರೈಂ
ಲಕ್ನೋ, ಜುಲೈ 19 : ಮತಾಂತರಕ್ಕೆ ವಿದೇಶಿ ಫಂಡಿಂಗ್, ಹಿಂದು ಯುವತಿಯರೇ ಟಾರ್ಗೆಟ್.. ಚಾಂಗೂರ್ ಬಾಬಾನ ಮತಾಂತರ ಜಾಲ ಪತ್ತೆ ಬೆನ್ನಲ್ಲೇ ಉತ್ತರ ಪ್ರದೇಶ ಪೊಲೀಸರು ಅಲರ್ಟ್ ಆಗಿದ್ದಾರೆ. ಮತ್ತಷ್ಟು ವಿದೇಶಿ ಹಣಕಾಸಿನ ನೆರವು ಮತ್ತು ಐಸಿಸ್ ಉಗ್ರರ ಶೈಲಿಯ ಮತಾಂತರ ದಂಧೆಯನ್ನು ಭೇದಿಸಿರುವ ಉತ್ತರ ಪ್ರದೇಶ ಪೊಲೀಸರು, ಆರು ರಾಜ್ಯಗಳಲ್ಲಿ ಹತ್ತು ಜನರನ್ನು ಬಂಧಿಸಿದ್ದಾರೆ.
ಶನಿವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕೃಷ್ಣ, ಮತಾಂತರ ದಂಧೆ ತಡೆಯುವ ನಿಟ್ಟಿನಲ್ಲಿ ಪೊಲೀಸರು 'ಮಿಷನ್ ಅಸ್ಮಿತಾ' ಕಾರ್ಯಾಚರಣೆ ಆರಂಭಿಸಿದ್ದಾರೆ. ಮತಾಂತರ ಸಿಂಡಿಕೇಟ್ ನ ಪ್ರಮುಖರಾದ ಮೊಹಮ್ಮದ್ ಉಮರ್ ಗೌತಮ್ ಮತ್ತು ಮುಫ್ತಿ ಜಹಾಂಗೀರ್ ಆಲಂ ಖಾಸ್ಮಿ ಅವರನ್ನು ಎಟಿಎಸ್ ಬಂಧಿಸಿದೆ ಎಂದು ತಿಳಿಸಿದ್ದಾರೆ.
ಜಮಾಲುದ್ದೀನ್ ಎಂದು ಕರೆಯಲ್ಪಡುವ ಛಾಂಗೂರ್ ಬಾಬಾ ನೇತೃತ್ವದ ಮತಾಂತರ ಜಾಲದ ಆರೋಪಿಗಳ ವಿಚಾರಣೆಯನ್ನು ಎಸ್ ಐಟಿ ಮತ್ತು ವಿಶೇಷ ಕಾರ್ಯಪಡೆ ನಡೆಸಿದ್ದು ಭಯಾನಕ ವಿಚಾರಗಳು ಪತ್ತೆಯಾಗಿವೆ. ಲವ್ ಜಿಹಾದ್, ಮತಾಂತರ ದಂಧೆ ನಡೆಸುವವರು, ತೀವ್ರವಾದಿಗಳು ಮತ್ತು ಜಾಗತಿಕ ಮಟ್ಟದಲ್ಲಿರುವ ಜಿಹಾದಿಗಳ ಜೊತೆಗೆ ಸೇರಿಕೊಂಡು ರಾಷ್ಟ್ರದ ಭದ್ರತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಈ ಸಂಬಂಧ ಆರು ರಾಜ್ಯಗಳಲ್ಲಿ 10 ಜನರನ್ನು ಬಂಧಿಸಲಾಗಿದೆ ಎಂದು ಡಿಜಿಪಿ ತಿಳಿಸಿದರು.
ಆರೋಪಿಗಳು ಯುವತಿಯರನ್ನು ಗುರಿಯಾಗಿಸಿದ್ದು, ಮತಾಂತರಕ್ಕೆ ಅನುಕೂಲವಾಗುವಂತೆ ಆಮಿಷವೊಡ್ಡುವುದು, ಲವ್ ಜಿಹಾದ್ ಮತ್ತಿತರ ವಿಧಾನಗಳ ಮೂಲಕ ಪ್ರಭಾವ ಬೀರಿದ್ದಾರೆ. ISIS ಶೈಲಿಯಲ್ಲಿ ಮತಾಂತರ ನಡೆಸಲಾಗುತ್ತಿದೆ. ಈ ಗುಂಪುಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಎಸ್ಡಿಪಿಐ ಮತ್ತು ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಸಾಧ್ಯತೆಗಳಿವೆ. ಈ ಮತಾಂತರ ಕಾರ್ಯಕ್ಕೆ "ಕೆನಡಾ, ಅಮೇರಿಕಾ, ಲಂಡನ್ ಮತ್ತು ದುಬೈಯಿಂದ ಹಣ ಸಂದಾಯವಾಗಿರುವುದು ಪತ್ತೆಯಾಗಿದೆ. ಮತ್ತಷ್ಟು ಮಂದಿ ಈ ಜಾಲದಲ್ಲಿ ತೊಡಗಿಸಿದ್ದು ಅವರನ್ನು ಬಂಧಿಸಲಾಗುವುದು ಎಂದು ಡಿಜಿಪಿ ಹೇಳಿದರು.
The Uttar Pradesh Police on Saturday said they have busted a large-scale illegal religious conversion racket and arrested 10 people from six states. The probe began in Agra in March after two sisters -- aged 33 and 18 -- were reported missing. Investigations revealed that they were allegedly coerced into religious conversion and were undergoing radicalization, the police said.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm