ಬ್ರೇಕಿಂಗ್ ನ್ಯೂಸ್
21-07-25 11:01 pm HK News Desk ಕ್ರೈಂ
ಬೀದರ್, ಜುಲೈ 21: ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಬೀದರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ಪ್ರಕರಣ ದಾಖಲಾಗಿದೆ. 25 ವರ್ಷದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪ ಮಾಡಲಾಗಿದೆ.
2023 ರ ಡಿಸೆಂಬರ್ನಿಂದ 2024 ರ ಮಾರ್ಚ್ವರೆಗೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದು ಮಹಾರಾಷ್ಟ್ರ ಮೂಲದ ಮಹಿಳೆಯು ದೂರು ದಾಖಲಿಸಿದ್ದಾರೆ.
ಇನ್ನು ಎಫ್ಐಆರ್ ಪ್ರಕಾರ, ಎರಡು ವರ್ಷಗಳ ಹಿಂದೆ ಪ್ರತೀಕ್ ಚೌಹಾಣ್ ಮತ್ತು ಮಹಿಳೆ ಪ್ರೀತಿ ಮಾಡಿದ್ದಾರೆ. ಮದುವೆಯಾಗುವುದಾಗಿ ಪ್ರತೀಕ್ ಭರವಸೆ ನೀಡಿದ್ದ. ಆ ಭರವಸೆಯ ಮೇರೆಗೆ ಆಕೆ ಆತನೊಂದಿಗೆ ಹಲವು ಸ್ಥಳಗಳಿಗೆ ಹೋಗಿದ್ದಳು. ಈ ವೇಳೆ ಆತ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಮೊದಲ ಅತ್ಯಾಚಾರ ಬೆಂಗಳೂರಿನ ಹೋಟೆಲ್ ರೂಮ್ನಲ್ಲಿ ಸೆಪ್ಟೆಂಬರ್ 2023 ರಲ್ಲಿ ನಡೆಯಿತು ಎಂದು ಮಹಿಳೆ ಆರೋಪಿಸಿದ್ದಾರೆ.


ಡಿಸೆಂಬರ್ 25, 2023 ರಂದು ಚೌಹಾಣ್ ಅವರ ಕುಟುಂಬದ ನಿವಾಸದಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆಯಿತು. ಎರಡೂ ಕುಟುಂಬಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮ ಜರುಗಿತು. ಆ ನಂತರ ಮದುವೆಯ ದಿನಾಂಕವನ್ನು ನಿಗದಿಪಡಿಸುವಂತೆ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರು ಪದೇ ಪದೇ ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ. ಬದಲಿಗೆ, ಲಾತೂರ್ ಮತ್ತು ಶಿರಡಿಗೆ ಧಾರ್ಮಿಕ ಭೇಟಿಗಳ ನೆಪದಲ್ಲಿ ಕರೆದೊಯ್ದು ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಯುವತಿ ಹೇಳಿದ್ದಾಳೆ.
ಅತ್ಯಾಚಾರ ಆರೋಪ ಸಂಬಂಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಬೀದರ್ ಜಿಲ್ಲಾ ಪೊಲೀಸರು ವಿವಿಧ ತಂಡಗಳನ್ನು ರಚಿಸಿ ತಲೆಮರೆಸಿಕೊಂಡಿರುವ ಪ್ರತೀಕ್ ಚೌಹಾಣ್ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ
Prateek Chauhan, son of BJP MLA Prabhu Chauhan, has been booked on charges of rape by the Bidar Women’s Police Station following a complaint by a 25-year-old woman from Maharashtra. The FIR accuses him of sexually assaulting the woman multiple times after allegedly luring her with the promise of marriage.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm