ಬ್ರೇಕಿಂಗ್ ನ್ಯೂಸ್
21-07-25 11:01 pm HK News Desk ಕ್ರೈಂ
ಬೀದರ್, ಜುಲೈ 21: ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಬೀದರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ಪ್ರಕರಣ ದಾಖಲಾಗಿದೆ. 25 ವರ್ಷದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪ ಮಾಡಲಾಗಿದೆ.
2023 ರ ಡಿಸೆಂಬರ್ನಿಂದ 2024 ರ ಮಾರ್ಚ್ವರೆಗೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದು ಮಹಾರಾಷ್ಟ್ರ ಮೂಲದ ಮಹಿಳೆಯು ದೂರು ದಾಖಲಿಸಿದ್ದಾರೆ.
ಇನ್ನು ಎಫ್ಐಆರ್ ಪ್ರಕಾರ, ಎರಡು ವರ್ಷಗಳ ಹಿಂದೆ ಪ್ರತೀಕ್ ಚೌಹಾಣ್ ಮತ್ತು ಮಹಿಳೆ ಪ್ರೀತಿ ಮಾಡಿದ್ದಾರೆ. ಮದುವೆಯಾಗುವುದಾಗಿ ಪ್ರತೀಕ್ ಭರವಸೆ ನೀಡಿದ್ದ. ಆ ಭರವಸೆಯ ಮೇರೆಗೆ ಆಕೆ ಆತನೊಂದಿಗೆ ಹಲವು ಸ್ಥಳಗಳಿಗೆ ಹೋಗಿದ್ದಳು. ಈ ವೇಳೆ ಆತ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಮೊದಲ ಅತ್ಯಾಚಾರ ಬೆಂಗಳೂರಿನ ಹೋಟೆಲ್ ರೂಮ್ನಲ್ಲಿ ಸೆಪ್ಟೆಂಬರ್ 2023 ರಲ್ಲಿ ನಡೆಯಿತು ಎಂದು ಮಹಿಳೆ ಆರೋಪಿಸಿದ್ದಾರೆ.


ಡಿಸೆಂಬರ್ 25, 2023 ರಂದು ಚೌಹಾಣ್ ಅವರ ಕುಟುಂಬದ ನಿವಾಸದಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆಯಿತು. ಎರಡೂ ಕುಟುಂಬಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮ ಜರುಗಿತು. ಆ ನಂತರ ಮದುವೆಯ ದಿನಾಂಕವನ್ನು ನಿಗದಿಪಡಿಸುವಂತೆ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರು ಪದೇ ಪದೇ ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ. ಬದಲಿಗೆ, ಲಾತೂರ್ ಮತ್ತು ಶಿರಡಿಗೆ ಧಾರ್ಮಿಕ ಭೇಟಿಗಳ ನೆಪದಲ್ಲಿ ಕರೆದೊಯ್ದು ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಯುವತಿ ಹೇಳಿದ್ದಾಳೆ.
ಅತ್ಯಾಚಾರ ಆರೋಪ ಸಂಬಂಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಬೀದರ್ ಜಿಲ್ಲಾ ಪೊಲೀಸರು ವಿವಿಧ ತಂಡಗಳನ್ನು ರಚಿಸಿ ತಲೆಮರೆಸಿಕೊಂಡಿರುವ ಪ್ರತೀಕ್ ಚೌಹಾಣ್ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ
Prateek Chauhan, son of BJP MLA Prabhu Chauhan, has been booked on charges of rape by the Bidar Women’s Police Station following a complaint by a 25-year-old woman from Maharashtra. The FIR accuses him of sexually assaulting the woman multiple times after allegedly luring her with the promise of marriage.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm