ಬ್ರೇಕಿಂಗ್ ನ್ಯೂಸ್
24-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.24 : ಡಿವೈಎಫ್ಐ ಕಾರ್ಯಕರ್ತನನ್ನು ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆಗೈದ ಘಟನೆ ಬುಧವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡ ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ರಹ್ಮಾನ್ ಅವರಿಗೆ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ. ರಹ್ಮಾನ್ ಜೊತೆಗಿದ್ದ ಶುಹೈಬ್ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯದ ಸಂದರ್ಭ ಇನ್ನೋರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್ ( 26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಇದೆ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹರತಾಳಕ್ಕೆ ಡಿವೈಎಫ್ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭ ಡಿವೈಎಫ್ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
An activist of DYFI was stabbed to death at Kanhangad in the district on the night of Wednesday December 23. The deceased is identified as Abdul Rahman (29).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am