ಬ್ರೇಕಿಂಗ್ ನ್ಯೂಸ್
24-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.24 : ಡಿವೈಎಫ್ಐ ಕಾರ್ಯಕರ್ತನನ್ನು ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆಗೈದ ಘಟನೆ ಬುಧವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡ ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ರಹ್ಮಾನ್ ಅವರಿಗೆ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ. ರಹ್ಮಾನ್ ಜೊತೆಗಿದ್ದ ಶುಹೈಬ್ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯದ ಸಂದರ್ಭ ಇನ್ನೋರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್ ( 26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಇದೆ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹರತಾಳಕ್ಕೆ ಡಿವೈಎಫ್ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭ ಡಿವೈಎಫ್ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
An activist of DYFI was stabbed to death at Kanhangad in the district on the night of Wednesday December 23. The deceased is identified as Abdul Rahman (29).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm