ಬ್ರೇಕಿಂಗ್ ನ್ಯೂಸ್
24-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.24 : ಡಿವೈಎಫ್ಐ ಕಾರ್ಯಕರ್ತನನ್ನು ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆಗೈದ ಘಟನೆ ಬುಧವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡ ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ರಹ್ಮಾನ್ ಅವರಿಗೆ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ. ರಹ್ಮಾನ್ ಜೊತೆಗಿದ್ದ ಶುಹೈಬ್ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯದ ಸಂದರ್ಭ ಇನ್ನೋರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್ ( 26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಇದೆ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹರತಾಳಕ್ಕೆ ಡಿವೈಎಫ್ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭ ಡಿವೈಎಫ್ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
An activist of DYFI was stabbed to death at Kanhangad in the district on the night of Wednesday December 23. The deceased is identified as Abdul Rahman (29).
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm