ಬ್ರೇಕಿಂಗ್ ನ್ಯೂಸ್
24-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.24 : ಡಿವೈಎಫ್ಐ ಕಾರ್ಯಕರ್ತನನ್ನು ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆಗೈದ ಘಟನೆ ಬುಧವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡ ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ರಹ್ಮಾನ್ ಅವರಿಗೆ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ. ರಹ್ಮಾನ್ ಜೊತೆಗಿದ್ದ ಶುಹೈಬ್ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯದ ಸಂದರ್ಭ ಇನ್ನೋರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್ ( 26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಇದೆ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹರತಾಳಕ್ಕೆ ಡಿವೈಎಫ್ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭ ಡಿವೈಎಫ್ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
An activist of DYFI was stabbed to death at Kanhangad in the district on the night of Wednesday December 23. The deceased is identified as Abdul Rahman (29).
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 03:31 pm
Mangalore Correspondent
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm