ಬ್ರೇಕಿಂಗ್ ನ್ಯೂಸ್
24-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.24 : ಡಿವೈಎಫ್ಐ ಕಾರ್ಯಕರ್ತನನ್ನು ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆಗೈದ ಘಟನೆ ಬುಧವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡ ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ರಹ್ಮಾನ್ ಅವರಿಗೆ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ. ರಹ್ಮಾನ್ ಜೊತೆಗಿದ್ದ ಶುಹೈಬ್ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಲಾಗಿದೆ.
ಕೃತ್ಯದ ಸಂದರ್ಭ ಇನ್ನೋರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್ ( 26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಇದೆ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹರತಾಳಕ್ಕೆ ಡಿವೈಎಫ್ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭ ಡಿವೈಎಫ್ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
An activist of DYFI was stabbed to death at Kanhangad in the district on the night of Wednesday December 23. The deceased is identified as Abdul Rahman (29).
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 04:47 pm
Mangalore Correspondent
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm