ಬ್ರೇಕಿಂಗ್ ನ್ಯೂಸ್
23-07-25 03:25 pm Mangalore Correspondent ಕ್ರೈಂ
ಮಂಗಳೂರು, ಜುಲೈ 23 : ಆನ್ ಲೈನ್ ಮೂಲಕ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚು ಕಮಿಷನ್ ಪಡೆಯುವ ಆಮಿಷಕ್ಕೆ ಬಲಿಯಾದ ಕಾರ್ಕಳ ಮೂಲದ ಯುವಕ, ಮಂಗಳೂರಿನ ಸಸಿಹಿತ್ಲುವಿನಲ್ಲಿ ವಾಸವಿರುವ ಅಶ್ವಿತ್ (34) ಎಂಬವರು 15.5 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಜ.28ರಂದು ಅಶ್ವಿತ್ ಅವರ ವಾಟ್ಸ್ ಆ್ಯಪ್ಗೆ ಮೀನಾ ಸಕ್ಸಾಲ್ ಎಂಬ ಹೆಸರಿನಲ್ಲಿ ಸಂದೇಶ ಬಂದಿತ್ತು. ಟೆಲಿಗ್ರಾಮ್ ಆ್ಯಪ್ನಲ್ಲಿ ಎಸ್-ಕಾಯಿನ್ ಇನ್ವೆಸ್ಟ್ಮೆಂಟ್ ಟಾಸ್ಕ್ ಗೆ ಸೇರುವಂತೆ ಸಂದೇಶದಲ್ಲಿ ತಿಳಿಸಲಾಗಿತ್ತು. ಅದರಂತೆ ಅಶ್ವಿತ್ ಅವರು ಈ ಆ್ಯಪ್ ಗೆ ಸೇರಿ ತಮ್ಮ ಖಾತೆಯ ವಿವರಗಳನ್ನು ಹಂಚಿಕೊಂಡಿದ್ದರು.
ಹೆಚ್ಚು ಹಣ ಹೂಡಿದರೆ ಇನ್ನೂ ಹೆಚ್ಚಿನ ಕಮಿಷನ್ ನೀಡುವುದಾಗಿ ವಂಚಕರು ಹೇಳಿದ್ದರು. ಇದನ್ನು ನಂಬಿದ ಅಶ್ವಿತ್ ಒಂದಷ್ಟು ಹಣ ಹೂಡಿಕೆ ಮಾಡಿದ್ದು ಆರಂಭದಲ್ಲಿ ಒಂದಷ್ಟು ಲಾಭಾಂಶ ಸಿಗುವಂತೆ ರುಚಿ ತೋರಿಸಿದ್ದರು. ಆಮೂಲಕ ಅಧಿಕ ಮೊತ್ತ ಹೂಡಿಕೆ ಮಾಡುವಂತೆ ಪ್ರೇರಣೆ ನೀಡಿದರು. ಮಹಾರಾಷ್ಟ್ರ ಬ್ಯಾಂಕ್ ನ ಮಂಗಳೂರು ಶಾಖೆಯಲ್ಲಿರುವ ತಮ್ಮ ಖಾತೆಯ ಮೂಲಕ ಜನವರಿಯಿಂದ ಜೂನ್ ವರೆಗೆ ಅಶ್ವಿತ್ ಹಂತ ಹಂತವಾಗಿ 15,52,650 ರೂ. ವರ್ಗಾಯಿಸಿದ್ದಾರೆ.
ವಂಚಕರು ಇನ್ನೂ ಹೆಚ್ಚಿನ ಹಣ ಹಾಕುವಂತೆ ಕೇಳಿದ್ದು ಅಶ್ವಿತ್ ನಿರಾಕರಿಸಿದ್ದರು. ಅಲ್ಲದೆ, ಈಗಾಗಲೇ ಹಾಕಿರುವ ಹಣವನ್ನು ಮರಳಿಸುವಂತೆ ಕೇಳಿದರು. ಆದರೆ ಹಾಕಿದ ಹಣ ಮರಳಿಸಲು ತೆರಿಗೆ ಪಾವತಿಸಬೇಕು ಎಂದು ಹೇಳಿದ್ದು ಆಬಳಿಕವಷ್ಟೇ ಹಣ ಹಿಂದಿರುಗಿಸುವುದಾಗಿ ತಿಳಿಸಿದ್ದರು. ತಾನು ಮೋಸ ಹೋಗಿರುವ ಕುರಿತು ಕಾರ್ಕಳ ನಗರ ಠಾಣೆಗೆ ಪೊಲೀಸ್ ದೂರು ನೀಡಿದ್ದಾರೆ.
Karkala Youth Loses ₹15.5 Lakh in Telegram Investment Scam Promising High Commissions
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm