ಬ್ರೇಕಿಂಗ್ ನ್ಯೂಸ್
23-07-25 04:49 pm Udupi Correspondent ಕ್ರೈಂ
ಉಡುಪಿ, ಜುಲೈ 23 : ಹೈದರಾಬಾದ್ನಲ್ಲಿ ಉಚ್ಚಿಲ ಮೂಲದ ಮಹಿಳೆಯೊಂದಿಗೆ ಎರಡು ವರ್ಷ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದ ವ್ಯಕ್ತಿಯೊಬ್ಬ ಮಂಗಳವಾರ ಪಡುಬಿದ್ರಿ ಠಾಣೆ ವ್ಯಾಪ್ತಿಯ ಉಚ್ಚಿಲದ ಆಕೆಯ ಮನೆಗೆ ನುಗ್ಗಿ ಕುತ್ತಿಗೆ ಹಿಸುಕಿ ಕೊಲೆಗೈಯಲು ಯತ್ನಿಸಿದ ಘಟನೆ ನಡೆದಿದೆ. ಅಷ್ಟರಲ್ಲಿ ಮಹಿಳೆಯ ಗಂಡ ಮತ್ತು ಸ್ಥಳೀಯರು ಸೇರಿದ್ದರಿಂದ ಆರೋಪಿ ಪರಾರಿಯಾಗಿದ್ದಾನೆ.
ವಿಷಯ ತಿಳಿಯುತ್ತಲೇ ಕಾರ್ಯಾಚರಣೆ ನಡೆಸಿದ ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್ಐ ಶಕ್ತಿವೇಲು ಮತ್ತು ಸಿಬಂದಿ ಆರೋಪಿ ಹೈದರಾಬಾದ್ ಮೂಲದ ವಿಶ್ವನಾಥ ನಾಯ್ಡು ಎಂಬಾತನನ್ನು ಉಚ್ಚಿಲದಲ್ಲೇ ಬಂಧಿಸಿದ್ದಾರೆ. ಪಡುಬಿದ್ರಿ ಮೂಲದ ಮಹಿಳೆ ಈ ಹಿಂದೆ ಹೈದರಾಬಾದ್ನ ವ್ಯಕ್ತಿಯ ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದು ಈ ವೇಳೆ ಪತಿಯನ್ನು ಬಿಟ್ಟು ತನ್ನನ್ನು ಮದುವೆಯಾಗುವಂತೆ ವಿಶ್ವನಾಥ ನಾಯ್ಡು ಒತ್ತಾಯಿಸಿದ್ದ.
ಮಹಿಳೆಯನ್ನು ಪ್ರೀತಿಸುವುದಾಗಿ ಹೇಳಿ ಪತಿಗೆ ವಿಚ್ಚೇದನ ನೀಡುವಂತೆ ಮತ್ತು ತನ್ನನ್ನು ಮದುವೆಯಾಗಿ ಜೊತೆಗೆ ಇರುವಂತೆ ಪೀಡಿಸುತ್ತಿದ್ದ. ಮಹಿಳೆ ಇದಕ್ಕೆ ವಿರೋಧಿಸಿದಾಗ ನಿನ್ನನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದ. ಇದರಿಂದ ಹೆದರಿದ್ದ ಮಹಿಳೆ ತನ್ನ ಗಂಡನೊಂದಿಗೆ ಉಡುಪಿ ಜಿಲ್ಲೆಯ ಉಚ್ಚಿಲಕ್ಕೆ ಬಂದು ನೆಲೆಸಿದ್ದರು. 2 ತಿಂಗಳ ಬಳಿಕ ಆತ ಹುಡುಕುತ್ತ ಬಂದಿದ್ದು ಮನೆಗೆ ನುಗ್ಗಿ ಮಹಿಳೆಯನ್ನು ಮದುವೆಯಾಗದಿದ್ದರೆ ಸಾಯಿಸುತ್ತೇನೆ ಎಂದು ಹೇಳಿ ಹಲ್ಲೆಗೆ ಯತ್ನಿಸಿದ್ದಾನೆ. ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ.
A shocking incident unfolded on Tuesday in Ucchila, Padubidri, where a Hyderabad-based realtor allegedly attempted to strangle a woman with whom he had a past personal and professional relationship. The woman, originally from Ucchila, had recently returned to her hometown with her husband, refusing to continue ties with the accused.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm