ಬ್ರೇಕಿಂಗ್ ನ್ಯೂಸ್
23-07-25 04:49 pm Udupi Correspondent ಕ್ರೈಂ
ಉಡುಪಿ, ಜುಲೈ 23 : ಹೈದರಾಬಾದ್ನಲ್ಲಿ ಉಚ್ಚಿಲ ಮೂಲದ ಮಹಿಳೆಯೊಂದಿಗೆ ಎರಡು ವರ್ಷ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದ ವ್ಯಕ್ತಿಯೊಬ್ಬ ಮಂಗಳವಾರ ಪಡುಬಿದ್ರಿ ಠಾಣೆ ವ್ಯಾಪ್ತಿಯ ಉಚ್ಚಿಲದ ಆಕೆಯ ಮನೆಗೆ ನುಗ್ಗಿ ಕುತ್ತಿಗೆ ಹಿಸುಕಿ ಕೊಲೆಗೈಯಲು ಯತ್ನಿಸಿದ ಘಟನೆ ನಡೆದಿದೆ. ಅಷ್ಟರಲ್ಲಿ ಮಹಿಳೆಯ ಗಂಡ ಮತ್ತು ಸ್ಥಳೀಯರು ಸೇರಿದ್ದರಿಂದ ಆರೋಪಿ ಪರಾರಿಯಾಗಿದ್ದಾನೆ.
ವಿಷಯ ತಿಳಿಯುತ್ತಲೇ ಕಾರ್ಯಾಚರಣೆ ನಡೆಸಿದ ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್ಐ ಶಕ್ತಿವೇಲು ಮತ್ತು ಸಿಬಂದಿ ಆರೋಪಿ ಹೈದರಾಬಾದ್ ಮೂಲದ ವಿಶ್ವನಾಥ ನಾಯ್ಡು ಎಂಬಾತನನ್ನು ಉಚ್ಚಿಲದಲ್ಲೇ ಬಂಧಿಸಿದ್ದಾರೆ. ಪಡುಬಿದ್ರಿ ಮೂಲದ ಮಹಿಳೆ ಈ ಹಿಂದೆ ಹೈದರಾಬಾದ್ನ ವ್ಯಕ್ತಿಯ ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದು ಈ ವೇಳೆ ಪತಿಯನ್ನು ಬಿಟ್ಟು ತನ್ನನ್ನು ಮದುವೆಯಾಗುವಂತೆ ವಿಶ್ವನಾಥ ನಾಯ್ಡು ಒತ್ತಾಯಿಸಿದ್ದ.
ಮಹಿಳೆಯನ್ನು ಪ್ರೀತಿಸುವುದಾಗಿ ಹೇಳಿ ಪತಿಗೆ ವಿಚ್ಚೇದನ ನೀಡುವಂತೆ ಮತ್ತು ತನ್ನನ್ನು ಮದುವೆಯಾಗಿ ಜೊತೆಗೆ ಇರುವಂತೆ ಪೀಡಿಸುತ್ತಿದ್ದ. ಮಹಿಳೆ ಇದಕ್ಕೆ ವಿರೋಧಿಸಿದಾಗ ನಿನ್ನನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದ. ಇದರಿಂದ ಹೆದರಿದ್ದ ಮಹಿಳೆ ತನ್ನ ಗಂಡನೊಂದಿಗೆ ಉಡುಪಿ ಜಿಲ್ಲೆಯ ಉಚ್ಚಿಲಕ್ಕೆ ಬಂದು ನೆಲೆಸಿದ್ದರು. 2 ತಿಂಗಳ ಬಳಿಕ ಆತ ಹುಡುಕುತ್ತ ಬಂದಿದ್ದು ಮನೆಗೆ ನುಗ್ಗಿ ಮಹಿಳೆಯನ್ನು ಮದುವೆಯಾಗದಿದ್ದರೆ ಸಾಯಿಸುತ್ತೇನೆ ಎಂದು ಹೇಳಿ ಹಲ್ಲೆಗೆ ಯತ್ನಿಸಿದ್ದಾನೆ. ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ.
A shocking incident unfolded on Tuesday in Ucchila, Padubidri, where a Hyderabad-based realtor allegedly attempted to strangle a woman with whom he had a past personal and professional relationship. The woman, originally from Ucchila, had recently returned to her hometown with her husband, refusing to continue ties with the accused.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm