ಬ್ರೇಕಿಂಗ್ ನ್ಯೂಸ್
26-07-25 09:35 pm HK News Desk ಕ್ರೈಂ
ಬೆಳಗಾವಿ, ಜುಲೈ 26 : ಸೈಬರ್ ವಂಚಕರ ಜಾಲದ ಖದೀಮರಿಗಾಗಿ ನಕಲಿ ದಾಖಲೆಗಳನ್ನು ಮುಂದಿಟ್ಟು ಬ್ಯಾಂಕ್ ಖಾತೆಗಳನ್ನು ಮಾಡಿಕೊಡುತ್ತಿದ್ದ ಮೂವರು ಆರೋಪಿಗಳನ್ನು ಚೆನ್ನೈ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ಬೆಳಗಾವಿ ನಗರದ ಆರ್ಪಿಡಿ ಕ್ರಾಸ್ನ ಬಿಬಿಎ ಪದವೀಧರ ಸರ್ವೇಶ ಕಿಣಿ, ಕುವೆಂಪು ನಗರದ ಅನಿಲ್ ಕೊಲ್ಲಾಪುರ, ಗಣೇಶಪುರದ ರೋಹನ್ ಕಾಂಬಳೆ ಬಂಧಿತರು. ಕರ್ನಾಟಕದಲ್ಲಿ ಮೂರು ಸೇರಿ ಈ ಮೂವರ ವಿರುದ್ಧ ದೇಶದ ವಿವಿಧ ಠಾಣೆಗಳಲ್ಲಿ 27 ಕೇಸ್ ದಾಖಲಾಗಿದೆ. ಕಮಿಷನ್ ಆಸೆ ಹುಟ್ಟಿಸಿ ಬ್ಯಾಂಕ್ ನಲ್ಲಿ ಕರೆಂಟ್ ಅಕೌಂಟ್ ತೆರೆದು ಕೊಡುವಂತೆ ಇಬ್ಬರಿಗೂ ಸರ್ವೇಶ್ ಪ್ರಚೋದನೆ ಮಾಡುತ್ತಿದ್ದ.



ಕಂಪನಿಗಳ ಹೆಸರಿನಲ್ಲಿ ಬ್ಯಾಂಕ್ಗೆ ನಕಲಿ ದಾಖಲೆ ಕೊಟ್ಟು ಕರೆಂಟ್ ಅಕೌಂಟ್ ತೆರೆಯುತ್ತಿದ್ದ ರೋಹನ್ ಮತ್ತು ಅನಿಲ್ ಅವುಗಳನ್ನು ಸರ್ವೇಶ್ ಮೂಲಕ ಸೈಬರ್ ವಂಚಕರಿಗೆ ಪೂರೈಸುತ್ತಿದ್ದರು. ಈ ಬ್ಯಾಂಕ್ ಖಾತೆಗಳ ಪಾಸ್ ಬುಕ್, ಅಕೌಂಟ್ ನಂಬರ್, ಎಟಿಎಂ ಕಾರ್ಡ್ ಗಳನ್ನು ಸರ್ವೇಶ್ ಗೆ ನೀಡಿದ್ದರು. ಇವರು ಮಾಡಿಕೊಡುತ್ತಿದ್ದ ಬ್ಯಾಂಕ್ ಅಕೌಂಟ್ ಗಳನ್ನು ಸರ್ವೇಶ್ ಸೈಬರ್ ವಂಚಕರಿಗೆ ನೀಡಿದ್ದ.
ಸೈಬರ್ ವಂಚಕರು ಅಮಾಯಕರ ಖಾತೆಗಳನ್ನು ಹ್ಯಾಕ್ ಮಾಡಿ, ಅದರಲ್ಲಿರುವ ಹಣವನ್ನು ಇವರು ಕೊಡುತ್ತಿದ್ದ ಅಕೌಂಟ್ಗೆ ವರ್ಗಾಯಿಸಿಕೊಳ್ತಿದ್ದರು. ಬಳಿಕ ಈ ಹಣವನ್ನು ಬೇರೆ ಬೇರೆ ಅಕೌಂಟ್ಗೆ ವರ್ಗಾವಣೆ ಮಾಡುತ್ತಿದ್ದುದು, ಹಣವನ್ನು ವಿತ್ ಡ್ರಾ ಮಾಡುತ್ತಿದ್ದುದು ತನಿಖೆಯಲ್ಲಿ ಪತ್ತೆಯಾಗಿದೆ. ಇವರ ಖಾತೆಯಲ್ಲಿ ಒಂದು ಕೋಟಿ ಹಣ ವರ್ಗಾವಣೆಯಾದಲ್ಲಿ 60 ಸಾವಿರ ಕಮಿಷನ್ ನೀಡುವುದಾಗಿ ಅನಿಲ್ ಮತ್ತು ರೋಹನ್ಗೆ ಆಮಿಷ ಒಡ್ಡಲಾಗಿತ್ತು. 10 ಕೋಟಿಗೂ ಅಧಿಕ ಹಣ ಬೆಳಗಾವಿಯಲ್ಲಿದ್ದ ವಂಚಕರ ಖಾತೆಗೆ ಬಂದಿರುವ ಶಂಕೆಯಿದ್ದು ಮೂವರನ್ನೂ ಪೊಲೀಸರು ಬಂಧಿಸಿ ಚೆನ್ನೈಗೆ ಕರೆದೊಯ್ದಿದ್ದಾರೆ.
Three individuals have been arrested by Chennai police in Belagavi for providing fake bank accounts to cyber fraudsters. The accused allegedly facilitated fraudulent transactions running into crores by supplying fake documents to open bank accounts on behalf of cybercriminals.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm