ಬ್ರೇಕಿಂಗ್ ನ್ಯೂಸ್
27-07-25 07:13 pm HK News Desk ಕ್ರೈಂ
ಬೋಧ ಗಯಾ, ಜುಲೈ.27: ಪ್ರಜ್ಞಾಹೀನಳಾಗಿದ್ದ 26 ವರ್ಷದ ಯುವತಿಯನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆದುಕೊಂಡು ಹೋಗುವಾಗ ಅತ್ಯಾಚಾರ ಎಸಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸದ್ಯ ಚಾಲಕ ಮತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಬ್ಯುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ನನ್ನ ಬಂಧಿಸಲಾಗಿದೆ. ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಜುಲೈ 24 ರಂದು ಬೋಧ್ ಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಗೃಹರಕ್ಷಕ ದಳದ ನೇಮಕಾತಿಗಾಗಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಮೂರ್ಛೆ ಹೋಗಿದ್ದಳು. ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ವ್ಯವಸ್ಥೆ ಮಾಡಿದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪ್ರಜ್ಞಾಹೀನಳಾಗಿದ್ದ ನನ್ನ ಮೇಲೆ ಕೆಲ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ದೂರಿನ ಸಂಬಂಧ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ವಿಶೇಷ ತಂಡ ಮತ್ತು ವಿಧಿವಿಜ್ಞಾನ ತಂಡವನ್ನು ರಚಿಸಿ ತನಿಖೆ ನಡೆಸಲಾಯಿತು. ಸಿಸಿಟಿವಿ, ಆಂಬ್ಯುಲೆನ್ಸ್ನಲ್ಲಿ ತನಿಖೆ ನಡೆಸಲಾಯಿತು. ಕೆಲವೇ ಗಂಟೆಗಳಲ್ಲಿ ಅಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ಇಬ್ಬರನ್ನು ಬಂಧಿಸಲಾಯಿತು.
ಇಂತ ದುಷ್ಕೃತ್ಯಗಳು ನಡೆದರು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಇಬ್ಬರು ಉಪಮುಖ್ಯಮಂತ್ರಿಗಳು ಇಂತಹ ವಿಷಯಗಳ ಬಗ್ಗೆ ಮೌನವಾಗಿರುವುದು ಘೋರ ಅಪರಾಧ. ಅತ್ಯಾಚಾರ, ಲೈಂಗಿಕ ಕಿರುಕುಳಗಳಂತಹ ಘಟನೆಗಳು ನಡೆಯುತ್ತಿದ್ದರು ರಕ್ತ ಕುದಿಯದಿದ್ದರೆ ಹೇಗೆ?ʼ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕಿಡಿಕಾರಿದ್ದಾರೆ.
Facing humidity and heat, a Bihar Military Police (BMP)-3 aspirant fainted during the physical recruitment test on Thursday (July 24, 2025) in Bodh Gaya and was allegedly gang-raped in an ambulance while being transported to a hospital.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm