ಬ್ರೇಕಿಂಗ್ ನ್ಯೂಸ್
28-07-25 11:20 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆದ್ದಿರುವುದಾಗಿ ಹೇಳಿ ಮಂಗಳೂರಿನ ಮಹಿಳೆಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿದ್ದು ಆಕೆಯಿಂದಲೇ 7 ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ. ವಂಚನೆಗೀಡಾದ ಮಹಿಳೆ ಉರ್ವಾ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಜುಲೈ 23ರಂದು ಫೇಸ್ಬುಕ್ ನೋಡುತ್ತಿದ್ದಾಗ ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ಲಿಂಕ್ ಇದ್ದುದನ್ನು ನೋಡಿ, ಅದರಲ್ಲಿನ ಪ್ರಶ್ನೆಗಳಿಗೆ ಸರಿ ಉತ್ತರಗಳನ್ನು ಹಾಕಿದ್ದರು. ಜುಲೈ 27ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಕರೆ ಮಾಡಿ 8 ಲಕ್ಷ ರೂ. ಗೆದ್ದಿರುವುದಾಗಿ ಹೇಳಿದ್ದಾನೆ. ಅಲ್ಲದೆ, ಹಣ ಪಡೆಯಲು ನಿಗದಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದಿದ್ದಾನೆ.
ಆತನ ಸೂಚನೆಯಂತೆ, ಮಹಿಳೆ ತನ್ನ ಆಧಾರ್ ಕಾರ್ಡ್, ಪಾನ್ ಕಾರ್ಡ್, ತನ್ನ ಫೋಟೋವನ್ನೂ ಕಳುಹಿಸಿದ್ದಾರೆ. ಆನಂತರ, ನೋಂದಣಿ ಶುಲ್ಕವೆಂದು ಹೇಳಿ ಹಣ ಕಟ್ಟಲು ಹೇಳಿದ್ದು, ಹಂತ ಹಂತವಾಗಿ ಮಹಿಳೆ ಅದನ್ನು ಪಾವತಿಸುತ್ತ ಹೋಗಿದ್ದಾರೆ. ಒಟ್ಟು 7.76 ಲಕ್ಷ ರೂಪಾಯಿ ಮೊತ್ತವನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿದ್ದಾರೆ. ಅಷ್ಟರಲ್ಲಿ ತಾನು ಮೋಸ ಹೋಗಿರುವುದಾಗಿ ತಿಳಿದು ಉರ್ವಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಸೈಬರ್ ವಂಚಕರು ವಾಟ್ಸಪ್ ಮೆಸೇಜ್ ಮಾಡಿ ಷೇರ್ ಮಾರ್ಕೆಟ್ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನು ಮುಂದಿಟ್ಟು ಜನರನ್ನು ಯಾಮಾರಿಸುವುದನ್ನ ನೋಡಿದ್ದೇವೆ. ಆದರೆ ಈ ಕೇಸಿನಲ್ಲಿ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲೂ ದೋಖಾ ಎಸಗಿದ್ದಾರೆ.
In a disturbing case of cyber fraud, a woman from Mangaluru was conned out of ₹7.76 lakh by cybercriminals who tricked her into believing she had won ₹8 lakh through the popular TV quiz show 'Kaun Banega Crorepati' (KBC). The incident has been reported at the Urwa Police Station.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm