ಬ್ರೇಕಿಂಗ್ ನ್ಯೂಸ್
28-07-25 11:20 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆದ್ದಿರುವುದಾಗಿ ಹೇಳಿ ಮಂಗಳೂರಿನ ಮಹಿಳೆಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿದ್ದು ಆಕೆಯಿಂದಲೇ 7 ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ. ವಂಚನೆಗೀಡಾದ ಮಹಿಳೆ ಉರ್ವಾ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಜುಲೈ 23ರಂದು ಫೇಸ್ಬುಕ್ ನೋಡುತ್ತಿದ್ದಾಗ ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ಲಿಂಕ್ ಇದ್ದುದನ್ನು ನೋಡಿ, ಅದರಲ್ಲಿನ ಪ್ರಶ್ನೆಗಳಿಗೆ ಸರಿ ಉತ್ತರಗಳನ್ನು ಹಾಕಿದ್ದರು. ಜುಲೈ 27ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಕರೆ ಮಾಡಿ 8 ಲಕ್ಷ ರೂ. ಗೆದ್ದಿರುವುದಾಗಿ ಹೇಳಿದ್ದಾನೆ. ಅಲ್ಲದೆ, ಹಣ ಪಡೆಯಲು ನಿಗದಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದಿದ್ದಾನೆ.
ಆತನ ಸೂಚನೆಯಂತೆ, ಮಹಿಳೆ ತನ್ನ ಆಧಾರ್ ಕಾರ್ಡ್, ಪಾನ್ ಕಾರ್ಡ್, ತನ್ನ ಫೋಟೋವನ್ನೂ ಕಳುಹಿಸಿದ್ದಾರೆ. ಆನಂತರ, ನೋಂದಣಿ ಶುಲ್ಕವೆಂದು ಹೇಳಿ ಹಣ ಕಟ್ಟಲು ಹೇಳಿದ್ದು, ಹಂತ ಹಂತವಾಗಿ ಮಹಿಳೆ ಅದನ್ನು ಪಾವತಿಸುತ್ತ ಹೋಗಿದ್ದಾರೆ. ಒಟ್ಟು 7.76 ಲಕ್ಷ ರೂಪಾಯಿ ಮೊತ್ತವನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿದ್ದಾರೆ. ಅಷ್ಟರಲ್ಲಿ ತಾನು ಮೋಸ ಹೋಗಿರುವುದಾಗಿ ತಿಳಿದು ಉರ್ವಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಸೈಬರ್ ವಂಚಕರು ವಾಟ್ಸಪ್ ಮೆಸೇಜ್ ಮಾಡಿ ಷೇರ್ ಮಾರ್ಕೆಟ್ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನು ಮುಂದಿಟ್ಟು ಜನರನ್ನು ಯಾಮಾರಿಸುವುದನ್ನ ನೋಡಿದ್ದೇವೆ. ಆದರೆ ಈ ಕೇಸಿನಲ್ಲಿ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲೂ ದೋಖಾ ಎಸಗಿದ್ದಾರೆ.
In a disturbing case of cyber fraud, a woman from Mangaluru was conned out of ₹7.76 lakh by cybercriminals who tricked her into believing she had won ₹8 lakh through the popular TV quiz show 'Kaun Banega Crorepati' (KBC). The incident has been reported at the Urwa Police Station.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 11:17 am
HK News Staffer
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm