ಬ್ರೇಕಿಂಗ್ ನ್ಯೂಸ್
01-08-25 05:05 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 1 : ಎರಡು ಕಾರುಗಳಲ್ಲಿ ಭಾರೀ ಪ್ರಮಾಣದ ಗಾಂಜಾ ಸಾಗಿಸುತ್ತಿದ್ದಾಗ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಮೂವರು ಆರೋಪಿಗಳ ಸಹಿತ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 31ರಂದು ಎರಡು ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಕಾರುಗಳನ್ನು ಅಡ್ಡಹಾಕಿದ್ದಾರೆ. ಆರೋಪಿಗಳು ಆಂಧ್ರ ಪ್ರದೇಶದಿಂದ ಗಾಂಜಾ ಸಾಗಾಟ ಮಾಡಕೊಂಡು ಮಂಗಳೂರಿಗೆ ಬಂದಿದ್ದರು.



ಕಾಸರಗೋಡು ಜಿಲ್ಲೆಯ ಆದೂರು ನಿವಾಸಿ ಮಸೂದ್ ಎಂ.ಕೆ., ದೇಲಂಪಾಡಿ ನಿವಾಸಿಗಳಾದ ಮೊಹಮ್ಮದ್ ಆಶಿಕ್ ಮತ್ತು ಸುಬೇರ್ (30) ಎಂಬವರು ಬಂಧಿತರು. ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು (KA-21-P-9084 ಹಾಗೂ KL-14-AF-7010) ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಸೊತ್ತಿನ ಒಟ್ಟು ಮೌಲ್ಯ ಸುಮಾರು 46,20,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು ನಗರ ಪೊಲೀಸರಿಂದ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು, ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
In a major crackdown on narcotics smuggling, the Mangaluru City Crime Branch (CCB) police have seized 123 kilograms of ganja and arrested three individuals while they were transporting the contraband in two cars. Acting on a tip-off, the CCB intercepted two vehicles carrying ganja on July 31 near Mathadakere at Kantavara Cross in Beluvai village, Moodbidri taluk
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm