ಬ್ರೇಕಿಂಗ್ ನ್ಯೂಸ್
03-08-25 10:11 pm Mangalore Correspondent ಕ್ರೈಂ
ಬಂಟ್ವಾಳ, ಆ.3 : ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಸ್ಥಳೀಯ ಶಾಲಾ ರಸ್ತೆಯ ಪಕ್ಕದಲ್ಲಿ ಇರಿಸಲಾಗಿತ್ತು. ಅದೇ ರೀತಿ ಚರ್ಚ್ ಕೆಳಭಾಗದಲ್ಲಿನ ರಸ್ತೆ ಬದಿಯಲ್ಲೂ ಹಲವು ವರ್ಷಗಳಿಂದ ಇನ್ನೊಂದು ಕಾಣಿಕೆ ಹುಂಡಿ ಇಡಲಾಗಿತ್ತು. ಇವೆರಡನ್ನೂ ಮುರಿದು ಹಣ ಕಳ್ಳತನ ಮಾಡಲಾಗಿತ್ತು. ಜುಲೈ 26ರಂದು ದೇವಸ್ಥಾನದ ಅಧ್ಯಕ್ಷ ಡಿ.ನಾರಾಯಣ ಭಟ್ ಎಂಬವರು ಕಳವಾಗಿದ್ದನ್ನು ಗಮನಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ವಿಟ್ಲ ಪೊಲೀಸರು ಆರೋಪಿಗಳಾದ ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ತ್ವಾಹಿದ್(19), ಉಮ್ಮರ್ ಫಾರೂಕ್ (18) ಮತ್ತು ಮೊಹಮ್ಮದ್ ನಬೀಲ್(18) ಎಂಬವರನ್ನು ಸೊತ್ತುಗಳ ಸಹಿತ ಬಂಧಿಸಿದ್ದಾರೆ. ಒಂದು ಡಬ್ಬಿಯಿಂದ 12 ಸಾವಿರ ರೂ. ಮತ್ತೊಂದು ಕಾಣಿಕೆ ಹುಂಡಿಯಿಂದ 15 ಸಾವಿರ ರೂ. ಕಳವು ಮಾಡಿರುವುದು ಕಂಡುಬಂದಿತ್ತು.
In a case of temple theft, police from Vittla station have arrested three youths in connection with the theft of donation boxes (hundi) from the Delanthabettu Shri Vishnumurthy Temple located in Kanyana village under the Vittla police limits.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm