ಬ್ರೇಕಿಂಗ್ ನ್ಯೂಸ್
05-08-25 10:39 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 05 : ಸೈಬರ್ ವಂಚನೆಗೊಳಗಾದ ಉದ್ಯಮಿಗೆ ಕಾನೂನು ಸೇವೆ ಒದಗಿಸುವುದಾಗಿ ನಂಬಿಸಿ ನಗರದಲ್ಲಿ ಕಾಲ್ ಸೆಂಟರ್ ತೆರೆದು ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪದ ಮೇಲೆ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಹೆಚ್ ಬಿಆರ್ ಲೇಔಟ್ ನಿವಾಸಿ ತೌಫೈಲ್ ಮೊಹಮ್ಮದ್ (38) ಬಂಧಿತ ಆರೋಪಿ. 12.5 ಲಕ್ಷ ಹಣ ಕಳೆದುಕೊಂಡ ಮಧ್ಯಪ್ರದೇಶ ಮೂಲದ ಉದ್ಯಮಿ ಸೂರ್ಯನಾರಾಯಣ್ ಸಿನ್ಹಾ ಎಂಬುವರು ನೀಡಿದ ದೂರು ಆಧರಿಸಿ ಸಿಸಿಬಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಈತ ನೀಡಿದ ಮಾಹಿತಿ ಆಧರಿಸಿ ಕಸ್ತೂರಿನಗರದಲ್ಲಿರುವ ಇಂಡಿಯಾ ಲೀಗಲ್ ಹೆಸರಿನಲ್ಲಿ ನಡೆಸುತ್ತಿದ್ದ ಕಾಲ್ ಸೆಂಟರ್ನಲ್ಲಿದ್ದ 10 ಕಂಪ್ಯೂಟರ್ ಹಾರ್ಡ್ ಡಿಸ್ಕ್ ಗಳು, 7 ನಕಲಿ ಕಂಪನಿ ಸೀಲ್ಗಳು, ಬಾಡಿಗೆ ಒಪ್ಪಂದ ಪತ್ರಗಳು, 11 ಸಿಮ್ ಕಾರ್ಡ್ ಗಳು ಹಾಗೂ ಎಸ್ಐಪಿ ಟ್ರಂಕ್ ವ್ಯವಸ್ಥೆಯ ಡೇಟಾ ಸೇರಿದಂತೆ ಇನ್ನಿತರ ಉಪಕರಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಸದ್ಯ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿ ಸೂರ್ಯನಾರಾಯಣ್ ಅವರು ಮಧ್ಯಪ್ರದೇಶದಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸುವುದಾಗಿ ನಂಬಿಸಿ 1.5 ಕೋಟಿ ವಂಚನೆಗೆ ಒಳಗಾಗಿದ್ದರು. ಈ ಹಣವನ್ನ ಮರಳಿ ಪಡೆಯಲು ಆನ್ ಲೈನ್ ನಲ್ಲಿ ಶೋಧ ನಡೆಸುವಾಗ ಆರೋಪಿ ಒಡೆತನದ ಕ್ವಿಕ್ ಮೊಟೊ ಲೀಗಲ್ ಸರ್ವಿಸ್ ವೆಬ್ ಸೈಟ್ ಕಂಡು ಸಂಪರ್ಕಿಸಿದ್ದಾರೆ. ವಂಚನೆ ವಿವರ ತಿಳಿದುಕೊಂಡು ಆರೋಪಿಯು ಕಾನೂನುಸೇವೆ ಒದಗಿಸುವುದಾಗಿ ದೂರುದಾರರಿಂದ 12.5 ಲಕ್ಷ ಹಣ ಶುಲ್ಕ ವರ್ಗಾಯಿಸಿಕೊಂಡು ವಂಚಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಕಾನೂನು ಸೇವೆ ಸೋಗಿನಲ್ಲಿ 12.5 ಲಕ್ಷ ಹಣ ವಂಚಿಸಿದ ಕಂಪನಿ ಬಗ್ಗೆ ಶೋಧಿಸಿದಾಗ ಬೆಂಗಳೂರಿನ ರಾಮೂರ್ತಿ ನಗರದಲ್ಲಿರುವುದಾಗಿ ಹೇಳಿ ಮಧ್ಯಪ್ರದೇಶ ಪೊಲೀಸರು ದೂರುದಾರರಿಗೆ ತಿಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪ್ರಕರಣ ವರ್ಗಾಯಿಸಿದ್ದರು.
ಈ ಪ್ರಕರಣದ ತನಿಖೆ ಕೈಗೊಂಡ ಸೈಬರ್ ಕ್ರೈಂ ಪೊಲೀಸರು ವೆಬ್ ಸೈಟ್ ನಲ್ಲಿನ ವಿಳಾಸ ಅಧರಿಸಿ ಕಸ್ತೂರಿನಗರಕ್ಕೆ ತೆರಳಿ ಪರಿಶೀಲಿಸಿದಾಗ ಕ್ವಿಕ್ ಮೊಟೊ ಲೀಗಲ್ ಸರ್ವಿಸ್ ಕಂಪನಿಯೇ ಇಲ್ಲದಿರುವುದು ತಿಳಿದು ಬಂದಿತ್ತು. ಇದರ ಬದಲಾಗಿ ಇಂಡಿಯಾ ಲೀಗಲ್ ಹೆಸರಿನಲ್ಲಿ ಕಾಲ್ ಸೆಂಟರ್ ನಡೆಸುತ್ತಿರುವುದು ಪೊಲೀಸರಿಗೆ ಗೊತ್ತಾಯ್ತು.
ಆರೋಪಿ ವಂಚಿಸುವುದನ್ನ ಕಾಯಕ ಮಾಡಿಕೊಂಡಿದ್ದ. ಕಳೆದ ಒಂದು ವರ್ಷದಿಂದ ನಗರದಲ್ಲಿ ಕಾಲ್ ಸೆಂಟರ್ ನಡೆಸುತ್ತಿದ್ದ. ಇದಕ್ಕಾಗಿ 12 ಮಂದಿ ಟೆಲಿಕಾಲರ್ ಗಳನ್ನ ನೇಮಿಸಿಕೊಂಡಿದ್ದ. ಕಾನೂನು ಸೇವೆ ಸೋಗಿನಲ್ಲಿ ಸಾರ್ವಜನಿಕರಿಗೆ ಹಣ ವಂಚಿಸುತ್ತಿದ್ದ. ಹಣ ವಂಚಿಸಿದ ಬಳಿಕ ಎಸ್ಐಪಿ ತಂತ್ರಜ್ಞಾನದಿಂದ ಮೊಬೈಲ್ ನಂಬರ್ ಗಳನ್ನ ಬ್ಲಾಕ್ ಮಾಡುತ್ತಿದ್ದ. ಆರೋಪಿ ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಈತನ ಸಹೋದರ ದುಬೈನಲ್ಲಿದ್ದು, ಈತನ ಸೂಚನೆ ಮೇರೆಗೆ ಕಂಪನಿ ನಡೆಸುತ್ತಿದ್ದೆ ಎಂದು ಹೇಳಿಕೆ ನೀಡಿದ್ದಾನೆ.
ಈತನನ್ನ ಈ ಹಿಂದೆ ವಂಚನೆ ಪ್ರಕರಣದಲ್ಲಿ ಪಾಂಡಿಚೇರಿ ಪೊಲೀಸರು ಬಂಧಿಸಿದ್ದರು. ಆರೋಪಿ ವಿರುದ್ಧ ರಾಷ್ಟ್ರೀಯ ಸೈಬರ್ ಕ್ರೈಂ ಪೋರ್ಟಲ್ ನಲ್ಲಿ 29ಕ್ಕೂ ಹೆಚ್ಚು ಅಧಿಕ ದೂರುಗಳು ದಾಖಲಾಗಿದ್ದು ಕೋಟ್ಯಂತರ ರೂಪಾಯಿ ವಂಚಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A businessman who earlier lost ₹1.5 crore in a cyber fraud has now fallen victim to a second scam, this time by a fraudster posing as a legal service provider. The accused has been arrested by the Bengaluru Cyber Crime Police.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm