ಬ್ರೇಕಿಂಗ್ ನ್ಯೂಸ್
06-08-25 11:04 am Udupi Correspondent ಕ್ರೈಂ
ಉಡುಪಿ, ಆ.6 : ಮನೆಗಳ್ಳತನ ಸೇರಿದಂತೆ ಹಲವೆಡೆ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಕಳ್ಳರಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕಿನ ಉಪ್ಪಳ್ಳಿ ನಿವಾಸಿ ಕೆ.ಇ.ಮೊಹಮ್ಮದ್ ಬಂಧಿತ ಆರೋಪಿ. ಈತನಿಂದ ಒಟ್ಟು 182 ಗ್ರಾಂ ಚಿನ್ನದ ಗಟ್ಟಿಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜೂ.27 ರಂದು ರಾತ್ರಿ ವೇಳೆ ಶಿರ್ವ ಗ್ರಾಮದ ಮಟ್ಟಾರು ರಸ್ತೆಯ ಬಳಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಕುಖ್ಯಾತ ಕಳ್ಳತನ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಎಂಬಾತನನ್ನು ಬಂಧಿಸಲಾಗಿತ್ತು, ಬಂಧಿತ ಆರೋಪಿಯನ್ನು ಕಸ್ಟಡಿಗೆ ತೆಗೆದು ವಿಚಾರಣೆ ನಡೆಸಿದಾಗ ಕಳವು ಮಾಡಿರುವ ಚಿನ್ನ ಮತ್ತು ಈ ಹಿಂದೆಯೂ ಕೆಲವು ಪ್ರಕರಣಗಳಲ್ಲಿ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಉಪ್ಪಳ್ಳಿಯ ಕೆ.ಇ.ಮೊಹಮ್ಮದ್ಗೆ ನೀಡಿರುವುದಾಗಿ ಬಗ್ಗೆ ಮಾಹಿತಿ ನೀಡಿದ್ದ. ಇದರಂತೆ ಕೆ.ಇ.ಮೊಹಮ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿರ್ವ, ಪಡುಬಿದ್ರಿ ಹಾಗೂ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿರುವ ಚಿನ್ನದ ಗಟ್ಟಿಗಳನ್ನು ಮೊಹಮ್ಮದ್ ತನ್ನ ಬಳಿ ಇರಿಸಿಕೊಂಡು ಅವನ್ನು ಕರಗಿಸಿ ಮಾರಾಟಕ್ಕೆ ವ್ಯವಸ್ಥೆ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಉಡುಪಿ ಪೊಲೀಸ್ ಜಿಲ್ಲಾ ಅಧೀಕ್ಷಕ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್.ನಾಯ್ಕ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ನೇತೃತ್ವದಲ್ಲಿ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಎಸ್.ಮಾನೆ ನೇತೃತ್ವದ ತಂಡ ಪತ್ತೆ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ ದಸ್ತಗಿರಿ ಮಾಡಿದ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಮತ್ತು ಸದ್ರಿ ಆರೋಪಿ ಕೆ.ಇ.ಮೊಹಮ್ಮದ್ ಅವರಿಂದ ಒಟ್ಟು 22.32 ಲಕ್ಷ ರೂ. ಮೌಲ್ಯದ 248.760 ಗ್ರಾಂ ತೂಕದ ಚಿನ್ನಾಭರಣ ಮತ್ತು ಚಿನ್ನದ ಗಟ್ಟಿಗಳನ್ನು ವಶಪಡಿಸಲಾಗಿದೆ.
Udupi police have arrested a man for aiding burglars in selling stolen gold by melting it and turning it into solid gold bars. The arrested individual has been identified as K.E. Mohammed, a resident of Uppalli in Udupi taluk.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm