ಬ್ರೇಕಿಂಗ್ ನ್ಯೂಸ್
06-08-25 11:04 am Udupi Correspondent ಕ್ರೈಂ
ಉಡುಪಿ, ಆ.6 : ಮನೆಗಳ್ಳತನ ಸೇರಿದಂತೆ ಹಲವೆಡೆ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಕಳ್ಳರಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕಿನ ಉಪ್ಪಳ್ಳಿ ನಿವಾಸಿ ಕೆ.ಇ.ಮೊಹಮ್ಮದ್ ಬಂಧಿತ ಆರೋಪಿ. ಈತನಿಂದ ಒಟ್ಟು 182 ಗ್ರಾಂ ಚಿನ್ನದ ಗಟ್ಟಿಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜೂ.27 ರಂದು ರಾತ್ರಿ ವೇಳೆ ಶಿರ್ವ ಗ್ರಾಮದ ಮಟ್ಟಾರು ರಸ್ತೆಯ ಬಳಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಕುಖ್ಯಾತ ಕಳ್ಳತನ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಎಂಬಾತನನ್ನು ಬಂಧಿಸಲಾಗಿತ್ತು, ಬಂಧಿತ ಆರೋಪಿಯನ್ನು ಕಸ್ಟಡಿಗೆ ತೆಗೆದು ವಿಚಾರಣೆ ನಡೆಸಿದಾಗ ಕಳವು ಮಾಡಿರುವ ಚಿನ್ನ ಮತ್ತು ಈ ಹಿಂದೆಯೂ ಕೆಲವು ಪ್ರಕರಣಗಳಲ್ಲಿ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಉಪ್ಪಳ್ಳಿಯ ಕೆ.ಇ.ಮೊಹಮ್ಮದ್ಗೆ ನೀಡಿರುವುದಾಗಿ ಬಗ್ಗೆ ಮಾಹಿತಿ ನೀಡಿದ್ದ. ಇದರಂತೆ ಕೆ.ಇ.ಮೊಹಮ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿರ್ವ, ಪಡುಬಿದ್ರಿ ಹಾಗೂ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿರುವ ಚಿನ್ನದ ಗಟ್ಟಿಗಳನ್ನು ಮೊಹಮ್ಮದ್ ತನ್ನ ಬಳಿ ಇರಿಸಿಕೊಂಡು ಅವನ್ನು ಕರಗಿಸಿ ಮಾರಾಟಕ್ಕೆ ವ್ಯವಸ್ಥೆ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಉಡುಪಿ ಪೊಲೀಸ್ ಜಿಲ್ಲಾ ಅಧೀಕ್ಷಕ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್.ನಾಯ್ಕ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ನೇತೃತ್ವದಲ್ಲಿ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಎಸ್.ಮಾನೆ ನೇತೃತ್ವದ ತಂಡ ಪತ್ತೆ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ ದಸ್ತಗಿರಿ ಮಾಡಿದ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಮತ್ತು ಸದ್ರಿ ಆರೋಪಿ ಕೆ.ಇ.ಮೊಹಮ್ಮದ್ ಅವರಿಂದ ಒಟ್ಟು 22.32 ಲಕ್ಷ ರೂ. ಮೌಲ್ಯದ 248.760 ಗ್ರಾಂ ತೂಕದ ಚಿನ್ನಾಭರಣ ಮತ್ತು ಚಿನ್ನದ ಗಟ್ಟಿಗಳನ್ನು ವಶಪಡಿಸಲಾಗಿದೆ.
Udupi police have arrested a man for aiding burglars in selling stolen gold by melting it and turning it into solid gold bars. The arrested individual has been identified as K.E. Mohammed, a resident of Uppalli in Udupi taluk.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm