ಬ್ರೇಕಿಂಗ್ ನ್ಯೂಸ್
06-08-25 11:04 am Udupi Correspondent ಕ್ರೈಂ
ಉಡುಪಿ, ಆ.6 : ಮನೆಗಳ್ಳತನ ಸೇರಿದಂತೆ ಹಲವೆಡೆ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಕಳ್ಳರಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕಿನ ಉಪ್ಪಳ್ಳಿ ನಿವಾಸಿ ಕೆ.ಇ.ಮೊಹಮ್ಮದ್ ಬಂಧಿತ ಆರೋಪಿ. ಈತನಿಂದ ಒಟ್ಟು 182 ಗ್ರಾಂ ಚಿನ್ನದ ಗಟ್ಟಿಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜೂ.27 ರಂದು ರಾತ್ರಿ ವೇಳೆ ಶಿರ್ವ ಗ್ರಾಮದ ಮಟ್ಟಾರು ರಸ್ತೆಯ ಬಳಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಕುಖ್ಯಾತ ಕಳ್ಳತನ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಎಂಬಾತನನ್ನು ಬಂಧಿಸಲಾಗಿತ್ತು, ಬಂಧಿತ ಆರೋಪಿಯನ್ನು ಕಸ್ಟಡಿಗೆ ತೆಗೆದು ವಿಚಾರಣೆ ನಡೆಸಿದಾಗ ಕಳವು ಮಾಡಿರುವ ಚಿನ್ನ ಮತ್ತು ಈ ಹಿಂದೆಯೂ ಕೆಲವು ಪ್ರಕರಣಗಳಲ್ಲಿ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಉಪ್ಪಳ್ಳಿಯ ಕೆ.ಇ.ಮೊಹಮ್ಮದ್ಗೆ ನೀಡಿರುವುದಾಗಿ ಬಗ್ಗೆ ಮಾಹಿತಿ ನೀಡಿದ್ದ. ಇದರಂತೆ ಕೆ.ಇ.ಮೊಹಮ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿರ್ವ, ಪಡುಬಿದ್ರಿ ಹಾಗೂ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿರುವ ಚಿನ್ನದ ಗಟ್ಟಿಗಳನ್ನು ಮೊಹಮ್ಮದ್ ತನ್ನ ಬಳಿ ಇರಿಸಿಕೊಂಡು ಅವನ್ನು ಕರಗಿಸಿ ಮಾರಾಟಕ್ಕೆ ವ್ಯವಸ್ಥೆ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಉಡುಪಿ ಪೊಲೀಸ್ ಜಿಲ್ಲಾ ಅಧೀಕ್ಷಕ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್.ನಾಯ್ಕ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ನೇತೃತ್ವದಲ್ಲಿ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಎಸ್.ಮಾನೆ ನೇತೃತ್ವದ ತಂಡ ಪತ್ತೆ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ ದಸ್ತಗಿರಿ ಮಾಡಿದ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಮತ್ತು ಸದ್ರಿ ಆರೋಪಿ ಕೆ.ಇ.ಮೊಹಮ್ಮದ್ ಅವರಿಂದ ಒಟ್ಟು 22.32 ಲಕ್ಷ ರೂ. ಮೌಲ್ಯದ 248.760 ಗ್ರಾಂ ತೂಕದ ಚಿನ್ನಾಭರಣ ಮತ್ತು ಚಿನ್ನದ ಗಟ್ಟಿಗಳನ್ನು ವಶಪಡಿಸಲಾಗಿದೆ.
Udupi police have arrested a man for aiding burglars in selling stolen gold by melting it and turning it into solid gold bars. The arrested individual has been identified as K.E. Mohammed, a resident of Uppalli in Udupi taluk.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm