ಬ್ರೇಕಿಂಗ್ ನ್ಯೂಸ್
06-08-25 11:04 am Udupi Correspondent ಕ್ರೈಂ
ಉಡುಪಿ, ಆ.6 : ಮನೆಗಳ್ಳತನ ಸೇರಿದಂತೆ ಹಲವೆಡೆ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಕಳ್ಳರಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕಿನ ಉಪ್ಪಳ್ಳಿ ನಿವಾಸಿ ಕೆ.ಇ.ಮೊಹಮ್ಮದ್ ಬಂಧಿತ ಆರೋಪಿ. ಈತನಿಂದ ಒಟ್ಟು 182 ಗ್ರಾಂ ಚಿನ್ನದ ಗಟ್ಟಿಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜೂ.27 ರಂದು ರಾತ್ರಿ ವೇಳೆ ಶಿರ್ವ ಗ್ರಾಮದ ಮಟ್ಟಾರು ರಸ್ತೆಯ ಬಳಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಕುಖ್ಯಾತ ಕಳ್ಳತನ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಎಂಬಾತನನ್ನು ಬಂಧಿಸಲಾಗಿತ್ತು, ಬಂಧಿತ ಆರೋಪಿಯನ್ನು ಕಸ್ಟಡಿಗೆ ತೆಗೆದು ವಿಚಾರಣೆ ನಡೆಸಿದಾಗ ಕಳವು ಮಾಡಿರುವ ಚಿನ್ನ ಮತ್ತು ಈ ಹಿಂದೆಯೂ ಕೆಲವು ಪ್ರಕರಣಗಳಲ್ಲಿ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಉಪ್ಪಳ್ಳಿಯ ಕೆ.ಇ.ಮೊಹಮ್ಮದ್ಗೆ ನೀಡಿರುವುದಾಗಿ ಬಗ್ಗೆ ಮಾಹಿತಿ ನೀಡಿದ್ದ. ಇದರಂತೆ ಕೆ.ಇ.ಮೊಹಮ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿರ್ವ, ಪಡುಬಿದ್ರಿ ಹಾಗೂ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿರುವ ಚಿನ್ನದ ಗಟ್ಟಿಗಳನ್ನು ಮೊಹಮ್ಮದ್ ತನ್ನ ಬಳಿ ಇರಿಸಿಕೊಂಡು ಅವನ್ನು ಕರಗಿಸಿ ಮಾರಾಟಕ್ಕೆ ವ್ಯವಸ್ಥೆ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಉಡುಪಿ ಪೊಲೀಸ್ ಜಿಲ್ಲಾ ಅಧೀಕ್ಷಕ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್.ನಾಯ್ಕ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ನೇತೃತ್ವದಲ್ಲಿ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಎಸ್.ಮಾನೆ ನೇತೃತ್ವದ ತಂಡ ಪತ್ತೆ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ ದಸ್ತಗಿರಿ ಮಾಡಿದ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಮತ್ತು ಸದ್ರಿ ಆರೋಪಿ ಕೆ.ಇ.ಮೊಹಮ್ಮದ್ ಅವರಿಂದ ಒಟ್ಟು 22.32 ಲಕ್ಷ ರೂ. ಮೌಲ್ಯದ 248.760 ಗ್ರಾಂ ತೂಕದ ಚಿನ್ನಾಭರಣ ಮತ್ತು ಚಿನ್ನದ ಗಟ್ಟಿಗಳನ್ನು ವಶಪಡಿಸಲಾಗಿದೆ.
Udupi police have arrested a man for aiding burglars in selling stolen gold by melting it and turning it into solid gold bars. The arrested individual has been identified as K.E. Mohammed, a resident of Uppalli in Udupi taluk.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm