ಬ್ರೇಕಿಂಗ್ ನ್ಯೂಸ್
06-08-25 08:02 pm Mangalore Correspondent ಕ್ರೈಂ
ಬೆಳ್ತಂಗಡಿ, ಆ.6: ಧರ್ಮಸ್ಥಳ ಬಳಿಯ ಪಾಂಗಾಳ ಎಂಬಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು ಹಲ್ಲೆಗೀಡಾದವರು ಉಜಿರೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರ ಕೈಯಲ್ಲಿದ್ದ ಕ್ಯಾಮರಾವನ್ನು ಒಡೆದು ಹಾಕಲಾಗಿದೆ.
ಪಾಂಗಾಳದಲ್ಲಿರುವ ಸೌಜನ್ಯಾ ಕುಟುಂಬಸ್ಥರ ಮನೆಯ ಸಮೀಪ ಘಟನೆ ನಡೆದಿದೆ. ಬುಧವಾರ ಸಂಜೆ ಬಿಗ್ಬಾಸ್ ಖ್ಯಾತಿಯ ರಜತ್ ಸೌಜನ್ಯಾ ಮನೆಗೆ ಬಂದಿದ್ದು ಕುಟುಂಬ ಸದಸ್ಯರ ಜೊತೆಗೆ ಮಾತುಕತೆ ನಡೆಸಿದ್ದರು. ಇದೇ ವೇಳೆ, ನಾಲ್ಕು ಮಂದಿ ಯೂಟ್ಯೂಬ್ ನವರು ರಜತ್ ಹೇಳಿಕೆ ಪಡೆಯಲು ಬಂದಿದ್ದರು. ಈ ವೇಳೆ, ಸ್ಥಳೀಯ ಕೆಲವರು ಸೇರಿದ್ದು ಕುಡ್ಲ ರಾಂಪೇಜ್ ಯೂಟ್ಯೂಬರ್ ಅಜಯ್ ಅಂಚನ್ ಅವರನ್ನು ಪ್ರಶ್ನಿಸಿ ಜೋರು ಮಾಡಿದ್ದಾರೆ. ಈ ವೇಳೆ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದವರನ್ನೂ ಜೋರು ಮಾಡಿ ವಿಡಿಯೋ ಬಂದ್ ಮಾಡಿಸಿದ್ದಾರೆ. ಇದೇ ವೇಳೆ, ಯೂಟ್ಯೂಬರ್ ಮತ್ತು ಸ್ಥಳೀಯರ ನಡುವೆ ಮಾತಿಗೆ ಮಾತು ಬೆಳೆದು ಸ್ಥಳೀಯರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಎರಡೂ ಕಡೆಯ 50ಕ್ಕು ಹೆಚ್ಚು ಮಂದಿ ಸೇರಿದ್ದು ಬಳಿಕ ಪೊಲೀಸರು ಚದುರಿಸಿದ್ದಾರೆ.





ಅಜಯ್ ಅಂಚನ್, ಅಭಿಷೇಕ್, ವಿಜಯ್ ಮತ್ತು ಇನ್ನೊಬ್ಬ ಕ್ಯಾಮೆರಾ ಮ್ಯಾನ್ ಮೇಲೆ ಹಲ್ಲೆ ಆಗಿದೆ ಎನ್ನಲಾಗುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ, ಇವರ ಕೈಯಲ್ಲಿದ್ದ ಲಕ್ಷಾಂತರ ಬೆಲೆಬಾಳುವ ಕ್ಯಾಮರಾವನ್ನು ಪುಡಿಗಟ್ಟಲಾಗಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕಾಗಮಿಸಿ ಗುಂಪನ್ನು ಚದುರಿಸಿದ್ದಾರೆ. ಎರಡು ದಿನದ ಹಿಂದೆಯೂ ಕುಡ್ಲ ರಾಂಪೇಜ್ ತಂಡದ ಅಜಯ್ ಅವರನ್ನು ಧರ್ಮಸ್ಥಳ ಸ್ನಾನಘಟ್ಟದ ಬಳಿ ಸ್ಥಳೀಯರು ಜೋರು ಮಾಡಿದ್ದು ಹಲ್ಲೆಗೂ ಮುಂದಾಗಿದ್ದರು.
Tension broke out near Pangala, close to Dharmasthala, after a group of local residents allegedly assaulted members of the ‘Kudla Rampage’ YouTube team Ajay Anchan and United Media. The incident occurred on Wednesday evening, leading to the hospitalization of four team members at a private hospital in Ujire. Reports indicate that expensive camera equipment was also damaged during the altercation.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm