ಬ್ರೇಕಿಂಗ್ ನ್ಯೂಸ್
07-08-25 08:59 pm Bangalore Correspondent ಕ್ರೈಂ
ಬೆಂಗಳೂರು, ಆ.7: ಸೈಬರ್ ಖದೀಮರು ಪೊಲೀಸರ ಸೋಗಿನಲ್ಲಿ ವೃದ್ಧ ವ್ಯಕ್ತಿಯನ್ನು ಒಂದು ವಾರ ಕಾಲ ಡಿಜಿಟಲ್ ಬಂಧನದಲ್ಲಿಟ್ಟು ಬರೋಬ್ಬರಿ 1.77 ಕೋಟಿ ರೂ. ಲಪಟಾಯಿಸಿದ್ದಾರೆ. ವಂಚನೆಗೆ ಒಳಗಾದ ಜಿ.ವಸಂತ್ ಕುಮಾರ್ (81) ಎಂಬವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದಾನಂದ ನಗರ ಬಳಿಯ ಎನ್ಜಿಇಎಫ್ ಲೇಔಟ್ ನಿವಾಸಿಯಾದ ವಸಂತ್ಕುಮಾರ್ ಅವರಿಗೆ ಸಂದೀಪ್ ಜಾಧವ್ ಎಂಬಾತ ಜುಲೈ 5ರಂದು ಮುಂಬೈನ ಕೊಲಾಬಾ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಸಿದ್ದ. ತಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಬ್ಯಾಂಕ್ ಖಾತೆ ತೆರೆಯಲಾಗಿದೆ. ಜೆಟ್ ಏರ್ವೇಸ್ನ ನರೇಶ್ ಗೋಯಲ್ ಎಂಬಾತನ ಹೆಸರಿಗೆ ತಮ್ಮ ಬ್ಯಾಂಕ್ ಖಾತೆಯಿಂದ ಹಣದ ಅಕ್ರಮ ವರ್ಗಾವಣೆಯಾಗಿದೆ ಎಂದು ವಸಂತ್ ಕುಮಾರ್ ಅವರನ್ನು ಹೆದರಿಸಿದ್ದ. ಬಳಿಕ ಕೆಲ ವ್ಯಕ್ತಿಗಳು ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ವಸಂತ್ ಕುಮಾರ್ ಅವರಿಗೆ ಕರೆ ಮಾಡಿ, ಜುಲೈ 9ರಿಂದ 15ರ ವರೆಗೆ ಡಿಜಿಟಲ್ ಅರೆಸ್ಟ್ ಎಂದು ಹೇಳಿ ಹೆದರಿಸಿದ್ದರು. ಅಲ್ಲದೆ, ವಾಟ್ಸಾಪ್ ವಿಡಿಯೊ ಕರೆಯ ಮೂಲಕ ನಕಲಿ ಬಂಧನ ವಾರಂಟ್ ತೋರಿಸಿ ಬೆದರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧನದ ವಾರಂಟ್ ನೋಡಿ ಭಯಬಿದ್ದ ವಸಂತ್ ಕುಮಾರ್, ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ವಂಚಕರಿಗೆ ಕೊಟ್ಟುಬಿಟ್ಟಿದ್ದರು. ನಂತರ ವಂಚಕರು, ತನಿಖೆ ಉದ್ದೇಶಕ್ಕೆ ತಮ್ಮ ಖಾತೆಯಲ್ಲಿನ ಹಣವನ್ನು ಬೇರೊಂದು ಖಾತೆಗೆ ವರ್ಗಾಯಿಸಬೇಕೆಂದು ವಸಂತ್ ಅವರಿಗೆ ಸೂಚಿಸಿದ್ದರು. ಹೀಗಾಗಿ, ವಸಂತ್ ಕುಮಾರ್ ತಮ್ಮ ಬ್ಯಾಂಕ್ ಖಾತೆಯಿಂದ ವಂಚಕರು ಸೂಚಿಸಿದ ಖಾತೆಗಳಿಗೆ ಹಂತ ಹಂತವಾಗಿ ಆರ್ಟಿಜಿಎಸ್ ಮೂಲಕ 1.77 ಕೋಟಿ ರೂ. ಹಣವನ್ನು ವರ್ಗಾಯಿಸಿದ್ದರು. ಬಳಿಕ ವಂಚಕರು ಅವರ ಸಂಪರ್ಕಕ್ಕೆ ಸಿಗದೆ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
In a recent case of cybercrime, an 81-year-old retired man from Bengaluru has been a victim of a growing digital arrest scam. He has lost Rs 1.77 crore to fraudsters who tricked him with a fake “digital arrest” over 10 days. The senior citizen, who lives in Sadananda Nagar (NGEF Layout), filed a complaint with the East CEN police on July 23 after realising he had been scammed.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm