ಬ್ರೇಕಿಂಗ್ ನ್ಯೂಸ್
13-08-25 05:40 pm Udupi Correspondent ಕ್ರೈಂ
ಕುಂದಾಪುರ, ಆ.13 : ವಾಟ್ಸ್ಆ್ಯಪ್ ಗ್ರೂಪ್ಗೆ ವ್ಯಕ್ತಿಯೊಬ್ಬರನ್ನು ಸೇರಿಸಿ ಕಂಪೆನಿಯಲ್ಲಿ ಹೂಡಿಕೆ ಮಾಡುವಂತೆ ಮನವೊಲಿಸಿ ಬಳಿಕ ಅವರ ಬ್ಯಾಂಕ್ ಖಾತೆಯಿಂದಲೇ ಸುಮಾರು 10 ಲಕ್ಷ ರೂ. ಲಪಟಾಯಿಸಿದ ಘಟನೆ ಬೈಂದೂರು ತಾಲೂಕಿನ ಉಪ್ಪುಂದದಲ್ಲಿ ನಡೆದಿದೆ.
ಕಿರಿಮಂಜೇಶ್ವರ ಗ್ರಾಮದ ನಾಗೂರು ನಿವಾಸಿ ಅಲ್ತಾಫ್ ಹುಸೇನ್ ತನ್ನ ಫೇಸ್ಬುಕ್ ಖಾತೆಯಲ್ಲಿ ಬಂದಿರುವ ಲಿಂಕ್ ಅನ್ನು ತೆರೆದಾಗ ವಾಟ್ಸ್ಆ್ಯಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು. ಗ್ರೂಪ್ನಲ್ಲಿದ್ದ ಪರಿನಿಥಿ ಜೈನ್ ಎಂಬ ಮಹಿಳೆ ತಮ್ಮ ಕಂಪೆನಿಯ ಬಗ್ಗೆ ಹೇಳಿಕೊಂಡು ವಿಳಾಸ, ದೂರವಾಣಿ ಸಂಖ್ಯೆ ನೀಡಿ ವಾಟ್ಸ್ಆ್ಯಪ್ ಮೂಲಕ ಷೇರು ಮಾರುಕಟ್ಟೆ ಬಗ್ಗೆ ನಿರಂತರ ಮಾಹಿತಿ ನೀಡಿದ್ದಳು. ಅನುಪ್ ತಿವಾರಿ ಎಂಬಾತನೂ ಪ್ರತಿನಿತ್ಯ ಪ್ರಮುಖ ಷೇರುಗಳ ಮಾಹಿತಿ ಒದಗಿಸುತ್ತಿದ್ದ.
ಕೆಲವು ದಿನಗಳ ಬಳಿಕ ಒಂದು ವೆಬ್ಸೈಟ್ ವಿಳಾಸ ಕಳುಹಿಸಿ ಅದರಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿ ಲಾಗಿನ್ ಐ.ಡಿ. ಮತ್ತು ಪಾಸ್ ವರ್ಡ್ ನೀಡಿದ್ದರು. ಇದಾದ ಬಳಿಕ ವಾಟ್ಸ್ಆ್ಯಪ್ನಲ್ಲಿ ಕಳುಹಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗೆ ಅಲ್ತಾಫ್ ಅವರು ತನ್ನ ಬ್ಯಾಂಕ್ ಖಾತೆಯಿಂದ ಒಟ್ಟು 10,15,000 ರೂ. ಪಾವತಿಸಿದ್ದರು. ಅವರ ವೆಬ್ ಸೈಟ್ನಲ್ಲಿ ಹೂಡಿಕೆ ಮಾಡಿದ ಹಣ ಮತ್ತು ಅದರ ಲಾಭಾಂಶದ ಸೇರಿ ದುಪ್ಪಟ್ಟು ಆಗಿ ಒಟ್ಟು ಮೊತ್ತ 75,42,343 ಇದೆ ಎಂದು ತೋರಿಸುತ್ತಿತ್ತು. ಆ ಮೊತ್ತವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ವೆಬ್ ಸೈಟ್ ಖಾತೆ ಬ್ಲಾಕ್ ಆಗಿತ್ತು.
ಈ ಬಗ್ಗೆ ಪರಿನಿಥಿ ಜೈನ್ ಅವರಲ್ಲಿ ಪ್ರಶ್ನಿಸಿದಾಗ ಈ ಮೊತ್ತದಲ್ಲಿ ಶೇ. 20ರಷ್ಟು ಕಮಿಷನ್ ಕಂಪೆನಿಗೆ ನೀಡಬೇಕು ಎಂದಿದ್ದಾಳೆ. ಹೂಡಿಕೆ ಮಾಡಿರುವ ಹಣದಲ್ಲಿ ಕಮಿಷನ್ ಕಡಿತ ಮಾಡಿ ಉಳಿದ ಹಣ ನೀಡುವಂತೆ ಅಲ್ತಾಫ್ ತಿಳಿಸಿದರೆ, ಅದಕ್ಕೆ ಪರಿಮಿಥಿ ಜೈನ್ ಒಪ್ಪದೇ ಇದ್ದಾಗ ಅನುಮಾನಗೊಂಡು ಕಂಪೆನಿಯ ವಿಳಾಸ ಇದ್ದ ಬೆಂಗಳೂರಿನ ಜಾಗಕ್ಕೆ ಹೋಗಿ ವಿಚಾರಿಸಿದರು. ಅಲ್ಲಿ ಅ ಕಂಪೆನಿಯೇ ಇಲ್ಲ ಎಂದು ತಿಳಿದಾಗ ತಾನು ಮೋಸ ಹೋಗಿರುವುದು ಖಚಿತವಾಗಿದ್ದು, ನ್ಯಾಯ ಒದಗಿಸುವಂತೆ ಬೈಂದೂರು ಪೊಲೀಸ್ ಠಾಣೆಯ ಮೊರೆ ಹೋಗಿದ್ದಾರೆ.
A man from Uppunda in Byndoor taluk lost over ₹10 lakh after being lured into a fake stock market investment scheme through a WhatsApp group. The scam came to light when he went to the company’s listed address in Bengaluru, only to discover it did not exist.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm