ಬ್ರೇಕಿಂಗ್ ನ್ಯೂಸ್
14-08-25 05:31 pm Bangalore Correspondent ಕ್ರೈಂ
ಬೆಂಗಳೂರು, ಆ 14 : ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ನನ್ನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಅಪಾರ್ಟ್ಮೆಂಟ್ಗೆ ತೆರಳಿ ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿ. ಮೊದಲ ಆರೋಪಿ ಪವಿತ್ರಾ ಗೌಡಳನ್ನ ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು.
ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ. ಬಳಿಕ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತೆ. ಬಳಿಕ ಅವರನ್ನು ಜೈಲಿಗೆ ಕಳುಹಿಸಲಾಗುತ್ತೆ. ಆದರೆ, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುತ್ತಾರೋ? ಇಲ್ಲವೋ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋಗುತ್ತಾರೋ? ಅನ್ನೋದು ಗೊತ್ತಾಗಬೇಕಿದೆ.
ಸಾಮಾನ್ಯವಾಗಿ ಜಾಮೀನು ರದ್ದು ಆದರೆ, ಆರೋಪಿಗಳಿಗೆ ನ್ಯಾಯಾಲಯ ಒಂದು ವಾರ, 10 ದಿನ ಹೀಗೆ ಪೊಲೀಸರಿಗೆ ಶರಣಾಗುವುದಕ್ಕೆ ಅವಕಾಶ ನೀಡುತ್ತೆ. ಆದರೆ, ದರ್ಶನ್ ಕೇಸ್ನಲ್ಲಿ ಹಾಗೆ ಆಗಲಿಲ್ಲ. ಸುಪ್ರೀಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯನ್ನು ತತಕ್ಷಣವೇ ಬಂಧಿಸಬೇಕು ಎಂದು ಆದೇಶ ನೀಡಿತ್ತು. ದರ್ಶನ್ ಕೇಸ್ನಲ್ಲಿ ಸುಪ್ರೀಂ ಕೋರ್ಟ್ ಯಾಕಿಷ್ಟು ಕಟುವಾದ ನಿರ್ಧಾರ ತೆಗೆದುಕೊಳ್ತು? ಅನ್ನೋದನ್ನು ವಕೀಲರು ರಿವೀಲ್ ಮಾಡಿದ್ದಾರೆ.
ಇನ್ನು ದರ್ಶನ್ ಬಂಧನದ ವೇಳೆ ಅಭಿಮಾನಿಗಳು ನಿವಾಸದ ಮುಂದೆ ಜಮಾಯಿಸಿದ್ದರು. ನೂಕು, ನುಗ್ಗಲು ತಪ್ಪಿಸುವ ಉದ್ದೇಶದಿಂದ ಕಾಮಾಕ್ಷಿ ಠಾಣೆ ಪೊಲೀಸರು ಕ್ರಮ ತೆಗೆದುಕೊಂಡು, ದರ್ಶನ್ ಅಭಿಮಾನಿಗಳನ್ನು ಅಲ್ಲಿಂದ ಚದುರಿಸಿದ್ದಾರೆ.
Just hours after the Supreme Court cancelled his bail, Kannada actor Darshan was arrested by police in connection with the Renukaswamy murder case.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm