ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪಿ  ಈಶ್ವರಮಂಗಲದಲ್ಲಿ ಬಂಧನ 

17-08-25 10:07 pm       Mangalore Correspondent   ಕ್ರೈಂ

ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಮನೆಯಲ್ಲಿ ಆ.12ರಂದು ನಡೆದ ಕಳ್ಳತನ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ (29) ಬಂಧಿತ. 

ಪುತ್ತೂರು, ಆ.17 : ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಮನೆಯಲ್ಲಿ ಆ.12ರಂದು ನಡೆದ ಕಳ್ಳತನ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ (29) ಬಂಧಿತ. 

ಮನೆಯಿಂದ ಯಾರೂ ಇಲ್ಲದ ಸಂದರ್ಭದಲ್ಲಿ ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದು ಕಳ್ಳತನ ಆಗಿತ್ತು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿ ಬಳಿಯಿಂದ 30.120 ಗ್ರಾಂ ಬಂಗಾರ ಮತ್ತು ಪ್ರಕರಣಕ್ಕೆ ಉಪಯೋಗಿಸಿದ ಡಿಸ್ಕವರಿ ಬೈಕ್ ಅನ್ನು ಸ್ವಾಧೀನಪಡಿಸಲಾಗಿದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ಮತ್ತು ಪೊಲೀಸ್ ನಿರೀಕ್ಷಕ ರವಿ ಬಿ.ಎಸ್ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್, ಎಎಸ್‌ಐ ಚಂದ್ರಶೇಖರ್, ಪ್ರವೀಣ್, ಮಧು, ಹರೀಶ್, ಸುಬ್ರಹ್ಮಣ್ಯ, ಆಕಾಶ್, ಯುವರಾಜ್, ಶರಣಪ್ಪ ಪಾಟೀಲ್, ಚಾಲಕರಾದ ಎಆರ್ ಎಸ್ ಐ ಯಜ್ಞ, ಹೆಚ್.ಜಿ ಹರಿಪ್ರಸಾದ್ ಮತ್ತು ಹೆಚ್.ಜಿ ನಿತೇಶ್‌ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.

In connection with a house theft case reported on August 12 in the Puttur Rural Police limits, police have arrested the accused and recovered stolen items.