ಬ್ರೇಕಿಂಗ್ ನ್ಯೂಸ್
19-08-25 12:41 pm Mangalore Correspondent ಕ್ರೈಂ
ಉಳ್ಳಾಲ, ಆ.19: ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಬ್ರಾಂಡ್ ನ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸುತ್ತಿದ್ದ ತೊಕ್ಕೊಟ್ಟು ಹೃದಯಭಾಗದ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ "ಸ್ಪೋರ್ಟ್ಸ್ ವಿನ್ನರ್" ಮಳಿಗೆಗೆ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಸಿ ವಿಜಯಕ್ರಾಂತಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ನಕಲಿ ಉತ್ಪನ್ನಗಳನ್ನ ಜಪ್ತಿ ಮಾಡಿದೆ.
ಕ್ರೀಡೆಗೆ ಸಂಬಂಧಿತ ಉತ್ಪನ್ನಗಳನ್ನ ಮಾರಾಟ ಮಾಡುತ್ತಿರುವ ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ ಮಳಿಗೆಯಲ್ಲಿ ಪ್ರತಿಷ್ಟಿತ ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಕಂಪನಿಯ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸಲಾಗುತ್ತಿದೆ ಎಂದು ಹರ್ಯಾಣದ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ. ಲಿಮಿಟೆಡ್ನ ಸಿಬ್ಬಂದಿ ಸ್ಟೀಫನ್ ರಾಜ್ ಎಂಬವರು ಸೋಮವಾರ ಉಳ್ಳಾಲ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದರು. ಸ್ಟೀಫನ್ ರಾಜ್ ಅವರ ದೂರಿನ ಮೇರೆಗೆ ಖುದ್ದು ಎಸಿಪಿ ವಿಜಯಕ್ರಾಂತಿ ಅವರೇ ಸೋಮವಾರ ಸಂಜೆ ಪೊಲೀಸರ ತಂಡದೊಂದಿಗೆ ಮಳಿಗೆಗೆ ದಾಳಿ ನಡೆಸಿ ನಕಲಿ ಬ್ರಾಂಡ್ ಉತ್ಪನ್ನಗಳನ್ನ ಜಪ್ತಿಗೊಳಿಸಿದ್ದಾರೆ.




ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರು ಪ್ರತಿಷ್ಟಿತ ಕಂಪನಿಗಳ ಹೆಸರಿನ ನಕಲಿ ಉತ್ಪನ್ನಗಳನ್ನ ಮಾರಾಟ ಮಾಡಿ ಗ್ರಾಹಕರಿಗೆ ಮೋಸ ಮಾಡಿ ಹಣ ಸಂಪಾದಿಸುತ್ತಿರುವ ಬಗ್ಗೆ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ.(ಲಿ)ಗೆ ಮಾಹಿತಿ ಲಭಿಸಿತ್ತು ಎನ್ನಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯ ನಿರೀಕ್ಷಕರಾದ ವಿರೂಪಾಕ್ಷ ಸ್ವಾಮಿ ಮತ್ತು ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರ ವಿರುದ್ಧ ಕಾಪಿರೈಟ್ ಆಕ್ಟ್ 1957 (U/s-51(1)(b) 63 ಕಲಂನಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
In a major crackdown on counterfeit sports goods, the Mangaluru South police, led by ACP Vijayakranti, raided the "Sports Winners" store located in the Smart City building at the heart of Thokottu and seized fake products bearing the names of reputed brands—Nivia, Cosco, Yonex, and VIVA.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm